AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೇಂಜರ್ಸ್ ದುಬೈಗಿಡ: ಕೋನೋ ಕಾರ್ಪಸ್ ಮನುಷ್ಯನಿಗೆ ಎಷ್ಟು ಡೇಂಜರ್ ಗೊತ್ತಾ?

ಸುಪ್ರೀಂಕೋರ್ಟ್ ಸೂಚನೆ ನೀಡಿದರೂ ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ಡೇಂಜರ್​​ ದುಬೈ ಗಿಡ ಬೆಳೆಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಗಿಡಗಳನ್ನ ತೆರವು ಮಾಡುವಂತೆ ಆಗ್ರಹಿಸಿದ್ದಾರೆ. ಹಾಗಾದರೆ ಈ ದುಬೈ ಗಿಡದಿಂದ ಮನುಷ್ಯರಿಗೆ ಹೇಗೆ ಹಾನಿ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಡೇಂಜರ್ಸ್ ದುಬೈಗಿಡ: ಕೋನೋ ಕಾರ್ಪಸ್ ಮನುಷ್ಯನಿಗೆ ಎಷ್ಟು ಡೇಂಜರ್ ಗೊತ್ತಾ?
ದುಬೈ ಗಿಡ
ಶಾಂತಮೂರ್ತಿ
| Edited By: |

Updated on:Oct 13, 2025 | 5:00 PM

Share

ಬೆಂಗಳೂರು, ಅಕ್ಟೋಬರ್​ 13: ರಾಜಧಾನಿಯ ರಸ್ತೆಗಳಲ್ಲಿ ನಿಷೇಧಿತ ಕೋನೋ ಕಾರ್ಪಸ್ (conocarpus plants) (ದುಬೈ ಗಿಡ) ಬೆಳೆಸಲಾಗುತ್ತಿದೆ. ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಈ ದುಬೈ ಗಿಡವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನೆಟ್ಟು ಪೋಷಿಸುತ್ತಿರುವ ಆರೋಪಗಳು ಕೇಳಿಬಂದಿವೆ. ಪರಿಸರ ಪ್ರಿಯರು ಕಳೆದ ವರ್ಷ ಈ ಗಿಡದ ಬಗ್ಗೆ ದೂರು ಸಲ್ಲಿಸಿದ್ದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ದುಬೈ ಗಿಡವನ್ನು ಬೆಳೆಸಿ ಸೈಲೆಂಟ್​ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆಂಧ್ರ, ಗುಜರಾತ್, ತೆಲಂಗಾಣದಲ್ಲಿ ಈಗಾಗಲೇ ಈ ಡೇಂಜರ್​ ಗಿಡವನ್ನು ಬ್ಯಾನ್​ ಮಾಡಲಾಗಿದೆ. ಆದರೆ ವರ್ಷ ಕಳೆದರೂ ಬೆಂಗಳೂರಿನ ರಸ್ತೆಗಳಲ್ಲಿ ತೆರವಾಗಿಲ್ಲ. ಒಟ್ಟು 5500 ದುಬೈ ಗಿಡಗಳನ್ನ ತನ್ನ ವ್ಯಾಪ್ತಿಯಲ್ಲಿ ಜಿಬಿಎ ಬೆಳೆಸಿದೆ. ನಿರ್ವಹಣೆ ಸುಲಭ ಎಂದು ಇದೇ ಗಿಡಗಳ ಪೋಷಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: 4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?

ಈಗಾಗಲೇ ಬೆಂಗಳೂರಿನ ರಸ್ತೆಗಳಲ್ಲಿ ದುಬೈ ಗಿಡ ಆಳೆತ್ತರ ಬೆಳೆದು ನಿಂತಿವೆ. ಈ ದುಬೈ ಗಿಡ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ ಎನ್ನಲಾಗುತ್ತಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಈ ಡೇಂಜರ್ ಟ್ರೀ ಆಕ್ಸಿಜನ್ ಬದಲು ಕಾರ್ಬನ್ ಡೈಆಕ್ಸೈಡ್ ರಿಲೀಸ್ ಮಾಡುತ್ತದೆ.

ಗಿಡ ತೆರವಿಗೆ ಪರಿಸರ ಪ್ರೇಮಿಗಳ ಆಗ್ರಹ

ಸದ್ಯ ರಾಜಧಾನಿಯ ರಸ್ತೆಗಳಲ್ಲಿ ಬೆಳೆಸಿರುವ ಈ ದುಬೈ ಗಿಡ ತೆರವಿಗೆ ಪರಿಸರ ಪ್ರೇಮಿಗಳಿಂದ ಆಗ್ರಹಿಸಲಾಗಿದೆ. ಇತ್ತ ದುಬೈ ಗಿಡ ಬೆಳೆಯದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೂ ರಾಜಧಾನಿಯಲ್ಲಿ ಈವರೆಗೆ  ತೆರವಾಗಿಲ್ಲ.

ಸೂಚನೆ ಬಂದ ಮೇಲೆ ಮುಂದಿನ ಕ್ರಮ

ಇನ್ನು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ, ಸರ್ಕಾರದ ಸೂಚನೆ ಬಂದ ಮೇಲೆ ಮುಂದಿನ ಕ್ರಮ ಎನ್ನುತ್ತಿದ್ದಾರೆ. ಸುಪ್ರೀಂಕೋರ್ಟ್ ಸೂಚನೆ ನೀಡಿದೆ, ಇಲ್ಲಿ ಸೂಚನೆ ಬಂದರೆ ಕ್ರಮಕೈಗೊಳ್ಳುತ್ತೇವೆ  ಎಂದು ಜಿಬಿಎ ಅಧಿಕಾರಿಗಳು ಹೇಳಿದ್ದಾರೆ.

ಕೋನೋಕಾರ್ಪಸ್ ಏಕೆ ಡೇಂಜರ್?

  • ಈ ಗಿಡ ಆಕ್ಸಿಜನ್ ಬದಲು ಕಾರ್ಬನ್ ಬಿಡುಗಡೆ ಮಾಡುತ್ತೆ
  • ಇದರ ಸುತ್ತಮುತ್ತ ವಾಸಿಸುವ ಜನರಿಗೆ ಅಸ್ತಮಾ, ಉಸಿರಾಟ ಸಮಸ್ಯೆ ಬರುತ್ತೆ
  • ಬೇರುಗಳಿಂದ ಪೈಪ್ ಲೈನ್​ಗಳಿಗೆ ಹಾನಿ ಮಾಡುತ್ತದೆ
  • ಅಂತರ್ಜಲ ಮಟ್ಟ ಕುಸಿಯುವಂತೆ ಮಾಡುವ ಸಾಧ್ಯತೆ
  • ಅತಿಹೆಚ್ಚು ಆಳದಲ್ಲಿ ಬೇರು ಬಿಡುವುದರಿಂದ ಅಕ್ಕಪಕ್ಕದ ಮರಗಿಡಗಳಿಗೆ ಸಮಸ್ಯೆ ಉಂಟು ಮಾಡುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Mon, 13 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್