AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್

ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 25, 2022 | 10:00 PM

Share

ಬೆಂಗಳೂರು: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಡೆಯುತ್ತಿರುವ ಹಿನ್ನೆಲೆ ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ರೈಲುಗಳ ಸೇವೆ ರದ್ದತಿ

  1. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು 2022ರ ಜುಲೈ 27 ಮತ್ತು ಆಗಸ್ಟ್ 03ರಂದು ರದ್ದುಗೊಳಿಸಲಾಗಿದೆ. ಮತ್ತು
  2. ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 29.07.2022 ಮತ್ತು 05.08.2022 ರಂದು ರದ್ದುಗೊಳಿಸಲಾಗುತ್ತದೆ.
  3. ರೈಲು ಸಂಖ್ಯೆ 16502 ಯಶವಂತಪುರ – ಅಹ್ಮದಾಬಾದ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 31.07.2022 ಮತ್ತು 07.08.2022 ರಂದು ರದ್ದುಗೊಳಿಸಲಾಗುತ್ತದೆ.
  4. ರೈಲು ಸಂಖ್ಯೆ 16501 ಅಹ್ಮದಾಬಾದ್ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 02.08.2022 ಮತ್ತು 09.08.2022 ರಂದು ರದ್ದುಗೊಳಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪುನರ್ ಚಾಲನೆಗೊಂಡ ರೈಲುಗಳು

ರೈಲು ಸಂಖ್ಯೆ. 16569 ಮತ್ತು 16570 ಯಶವಂತಪುರ – ಕಾಚಿಗುಡ- ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಅನ್ನು ಪುನರ್ ಚಾಲನೆಗೊಳಿಸಲಾಗಿದೆ.

ರೈಲು ಸಂಖ್ಯೆ 16569 ಯಶವಂತಪುರ – ಕಾಚಿಗುಡ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಯಶವಂತಪುರದಿಂದ 29.07.2022 ರಿಂದ 26.08.2022 ರವರೆಗೆ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಮತ್ತು ರೈಲು ಸಂಖ್ಯೆ 16570 ಕಾಚಿಗುಡ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್, ಪ್ರತಿ ಶನಿವಾರದಂದು 30.07.2022 ರಿಂದ 27.08.2022 ರವರೆಗೆ ಕಾಚಿಗುಡದಿಂದ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಧರ್ಮಾವರಂ ನಿಲ್ದಾಣಕ್ಕೆ ರಾತ್ರಿ 11.43 ಗಂಟೆಗೆ ಆಗಮಿಸುವುದು.

Published On - 9:54 pm, Mon, 25 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ