AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್

ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jul 25, 2022 | 10:00 PM

Share

ಬೆಂಗಳೂರು: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಡೆಯುತ್ತಿರುವ ಹಿನ್ನೆಲೆ ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ರೈಲುಗಳ ಸೇವೆ ರದ್ದತಿ

  1. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು 2022ರ ಜುಲೈ 27 ಮತ್ತು ಆಗಸ್ಟ್ 03ರಂದು ರದ್ದುಗೊಳಿಸಲಾಗಿದೆ. ಮತ್ತು
  2. ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 29.07.2022 ಮತ್ತು 05.08.2022 ರಂದು ರದ್ದುಗೊಳಿಸಲಾಗುತ್ತದೆ.
  3. ರೈಲು ಸಂಖ್ಯೆ 16502 ಯಶವಂತಪುರ – ಅಹ್ಮದಾಬಾದ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 31.07.2022 ಮತ್ತು 07.08.2022 ರಂದು ರದ್ದುಗೊಳಿಸಲಾಗುತ್ತದೆ.
  4. ರೈಲು ಸಂಖ್ಯೆ 16501 ಅಹ್ಮದಾಬಾದ್ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 02.08.2022 ಮತ್ತು 09.08.2022 ರಂದು ರದ್ದುಗೊಳಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪುನರ್ ಚಾಲನೆಗೊಂಡ ರೈಲುಗಳು

ರೈಲು ಸಂಖ್ಯೆ. 16569 ಮತ್ತು 16570 ಯಶವಂತಪುರ – ಕಾಚಿಗುಡ- ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಅನ್ನು ಪುನರ್ ಚಾಲನೆಗೊಳಿಸಲಾಗಿದೆ.

ರೈಲು ಸಂಖ್ಯೆ 16569 ಯಶವಂತಪುರ – ಕಾಚಿಗುಡ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಯಶವಂತಪುರದಿಂದ 29.07.2022 ರಿಂದ 26.08.2022 ರವರೆಗೆ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಮತ್ತು ರೈಲು ಸಂಖ್ಯೆ 16570 ಕಾಚಿಗುಡ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್, ಪ್ರತಿ ಶನಿವಾರದಂದು 30.07.2022 ರಿಂದ 27.08.2022 ರವರೆಗೆ ಕಾಚಿಗುಡದಿಂದ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಧರ್ಮಾವರಂ ನಿಲ್ದಾಣಕ್ಕೆ ರಾತ್ರಿ 11.43 ಗಂಟೆಗೆ ಆಗಮಿಸುವುದು.

Published On - 9:54 pm, Mon, 25 July 22

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ