AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್

ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jul 25, 2022 | 10:00 PM

Share

ಬೆಂಗಳೂರು: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಡೆಯುತ್ತಿರುವ ಹಿನ್ನೆಲೆ ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ರೈಲುಗಳ ಸೇವೆ ರದ್ದತಿ

  1. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು 2022ರ ಜುಲೈ 27 ಮತ್ತು ಆಗಸ್ಟ್ 03ರಂದು ರದ್ದುಗೊಳಿಸಲಾಗಿದೆ. ಮತ್ತು
  2. ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 29.07.2022 ಮತ್ತು 05.08.2022 ರಂದು ರದ್ದುಗೊಳಿಸಲಾಗುತ್ತದೆ.
  3. ರೈಲು ಸಂಖ್ಯೆ 16502 ಯಶವಂತಪುರ – ಅಹ್ಮದಾಬಾದ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 31.07.2022 ಮತ್ತು 07.08.2022 ರಂದು ರದ್ದುಗೊಳಿಸಲಾಗುತ್ತದೆ.
  4. ರೈಲು ಸಂಖ್ಯೆ 16501 ಅಹ್ಮದಾಬಾದ್ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 02.08.2022 ಮತ್ತು 09.08.2022 ರಂದು ರದ್ದುಗೊಳಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪುನರ್ ಚಾಲನೆಗೊಂಡ ರೈಲುಗಳು

ರೈಲು ಸಂಖ್ಯೆ. 16569 ಮತ್ತು 16570 ಯಶವಂತಪುರ – ಕಾಚಿಗುಡ- ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಅನ್ನು ಪುನರ್ ಚಾಲನೆಗೊಳಿಸಲಾಗಿದೆ.

ರೈಲು ಸಂಖ್ಯೆ 16569 ಯಶವಂತಪುರ – ಕಾಚಿಗುಡ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಯಶವಂತಪುರದಿಂದ 29.07.2022 ರಿಂದ 26.08.2022 ರವರೆಗೆ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಮತ್ತು ರೈಲು ಸಂಖ್ಯೆ 16570 ಕಾಚಿಗುಡ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್, ಪ್ರತಿ ಶನಿವಾರದಂದು 30.07.2022 ರಿಂದ 27.08.2022 ರವರೆಗೆ ಕಾಚಿಗುಡದಿಂದ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಧರ್ಮಾವರಂ ನಿಲ್ದಾಣಕ್ಕೆ ರಾತ್ರಿ 11.43 ಗಂಟೆಗೆ ಆಗಮಿಸುವುದು.

Published On - 9:54 pm, Mon, 25 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ