AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್

ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ನಾನ್-ಇಂಟರ್‌ಲಾಕಿಂಗ್ ಕಾಮಗಾರಿ: ಯಶವಂತಪುರದಿಂದ ಅಹ್ಮದಾಬಾದ್​ಗೆ ಬಿತ್ತು ರೆಡ್ ಸಿಗ್ನಲ್, ಯಶವಂತಪುರ ಕಾಚಿಗುಡಗೆ ಸಿಕ್ತು ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 25, 2022 | 10:00 PM

Share

ಬೆಂಗಳೂರು: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಡೆಯುತ್ತಿರುವ ಹಿನ್ನೆಲೆ ಕೇಂದ್ರೀಯ ರೈಲ್ವೆ ಇಲಾಖೆಯ ಸೂಚನೆಯಂತೆ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ಅದೇ ರೀತಿ ಎರಡು ರೈಲುಗಳನ್ನು ಪುನರ್ ಚಾಲನೆ ಮಾಡಲಾಗಿದೆ.

ರೈಲುಗಳ ಸೇವೆ ರದ್ದತಿ

  1. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು 2022ರ ಜುಲೈ 27 ಮತ್ತು ಆಗಸ್ಟ್ 03ರಂದು ರದ್ದುಗೊಳಿಸಲಾಗಿದೆ. ಮತ್ತು
  2. ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 29.07.2022 ಮತ್ತು 05.08.2022 ರಂದು ರದ್ದುಗೊಳಿಸಲಾಗುತ್ತದೆ.
  3. ರೈಲು ಸಂಖ್ಯೆ 16502 ಯಶವಂತಪುರ – ಅಹ್ಮದಾಬಾದ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 31.07.2022 ಮತ್ತು 07.08.2022 ರಂದು ರದ್ದುಗೊಳಿಸಲಾಗುತ್ತದೆ.
  4. ರೈಲು ಸಂಖ್ಯೆ 16501 ಅಹ್ಮದಾಬಾದ್ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 02.08.2022 ಮತ್ತು 09.08.2022 ರಂದು ರದ್ದುಗೊಳಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪುನರ್ ಚಾಲನೆಗೊಂಡ ರೈಲುಗಳು

ರೈಲು ಸಂಖ್ಯೆ. 16569 ಮತ್ತು 16570 ಯಶವಂತಪುರ – ಕಾಚಿಗುಡ- ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಅನ್ನು ಪುನರ್ ಚಾಲನೆಗೊಳಿಸಲಾಗಿದೆ.

ರೈಲು ಸಂಖ್ಯೆ 16569 ಯಶವಂತಪುರ – ಕಾಚಿಗುಡ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಯಶವಂತಪುರದಿಂದ 29.07.2022 ರಿಂದ 26.08.2022 ರವರೆಗೆ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಮತ್ತು ರೈಲು ಸಂಖ್ಯೆ 16570 ಕಾಚಿಗುಡ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್, ಪ್ರತಿ ಶನಿವಾರದಂದು 30.07.2022 ರಿಂದ 27.08.2022 ರವರೆಗೆ ಕಾಚಿಗುಡದಿಂದ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಧರ್ಮಾವರಂ ನಿಲ್ದಾಣಕ್ಕೆ ರಾತ್ರಿ 11.43 ಗಂಟೆಗೆ ಆಗಮಿಸುವುದು.

Published On - 9:54 pm, Mon, 25 July 22

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ