AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infra Awards: ಬೆಂಗಳೂರು ಮೆಟ್ರೋ ಮತ್ತೊಂದು ಗೌರವ; ಭೂ ಸಾರಿಗೆ ನಿರ್ದೇಶನಾಲಯದ ಅತ್ಯುತ್ತಮ ನಗರ ಸಾರಿಗೆ ಪ್ರಶಸ್ತಿ

ಕೊಚ್ಚಿಯಲ್ಲಿ ನಡೆದ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್ ನಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ ನೀಡಲಾಗಿದೆ.

Infra Awards: ಬೆಂಗಳೂರು ಮೆಟ್ರೋ ಮತ್ತೊಂದು ಗೌರವ; ಭೂ ಸಾರಿಗೆ ನಿರ್ದೇಶನಾಲಯದ ಅತ್ಯುತ್ತಮ ನಗರ ಸಾರಿಗೆ ಪ್ರಶಸ್ತಿ
ನಮ್ಮ ಮೆಟ್ರೋ
TV9 Web
| Updated By: ಆಯೇಷಾ ಬಾನು|

Updated on:Nov 07, 2022 | 1:07 PM

Share

ಬೆಂಗಳೂರು: ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿಗೆ ಪಾತ್ರವಾಗಿದೆ. ಕೊಚ್ಚಿಯಲ್ಲಿ ನಡೆದ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್ ನಲ್ಲಿ ಬಿಎಂಆರ್ ಸಿಎಲ್ ಗೆ ಪ್ರಶಸ್ತಿ ನೀಡಲಾಗಿದೆ. ಅತ್ಯುತ್ತಮ ಪ್ರಯಾಣಿಕ ಸೇವೆ ಮತ್ತು ತೃಪ್ತಿ ನೀಡುತ್ತಿದೆ ಎಂದು ಮೆಟ್ರೋ ರೈಲು ವರ್ಗದ ಅಡಿಯಲ್ಲಿ ನಗರ ಸಾರಿಗೆ ಶ್ರೇಷ್ಠತೆಯಲ್ಲಿ ಬಿಎಂಆರ್ ಸಿಎಲ್ ಗೆ ಪ್ರಶಸ್ತಿ ನೀಡಲಾಗಿದೆ.

ಅರ್ಬನ್ ಇನ್ಫ್ರಾ ಕಮ್ಯುನಿಕೇಷನ್ಸ್ ಮತ್ತು PR ಕಂಪನಿಯು ಆಯೋಜಿಸಿದ ಎರಡನೇ ಆವೃತ್ತಿಯ ಕಾರ್ಯಕ್ರಮದಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಬಿಎಂಆರ್​ಸಿಎಲ್ ಅರ್ಬನ್ ಇನ್ಫ್ರಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕೈಗಾರಿಕಾ ವಿಭಾಗದಡಿಯಲ್ಲಿ ಅತ್ಯಂತ ನವೀನ ಅರ್ಬನ್ ಮೊಬಿಲಿಟಿ ಲೀಡರ್ ಪ್ರಶಸ್ತಿಯನ್ನು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರಾದ ವಿ ಮಂಜುಳಾ ಅವರು ಪಡೆದಿದ್ದಾರೆ. ಕಾರ್ಪೊರೇಟ್ ವರ್ಗದ ಅಡಿಯಲ್ಲಿ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಸಿಲಿಕಾನ್ ವ್ಯಾಲಿಯ ಅತ್ಯುತ್ತಮ ಸಾರ್ವಜನಿಕ ಸಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಬಿಎಂಆರ್​ಸಿಎಲ್​ಗೆ ಮತ್ತೊಂದು ಗರಿ ಏರಿದೆ. ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ರೈಲು ಮತ್ತು ಮೆಟ್ರೋ ಸಿಸ್ಟಮ್ಸ್ ಸ್ವದೇಶಿ ಆವಿಷ್ಕಾರದಲ್ಲಿ ಶ್ರೇಷ್ಠತೆಗಾಗಿ ಪ್ರಶಸ್ತಿ ಪಡೆದುಕೊಂಡಿದೆ. ಇನ್ನು ಹುಬ್ಬಳ್ಳಿ-ಧಾರವಾಡ ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್ ಲಿಮಿಟೆಡ್‌ ಟ್ರಾನ್ಸಿಟ್ ಮತ್ತು ಮೊಬಿಲಿಟಿ ವಿಭಾಗದಲ್ಲಿ ಹೆಚ್ಚು ಆದ್ಯತೆಯ ಸಾರಿಗೆ ವ್ಯವಸ್ಥೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಗರ ಮೂಲಸೌಕರ್ಯ ವಿಭಾಗದ ಅಡಿಯಲ್ಲಿ DULT ನಗರಾಭಿವೃದ್ಧಿಗಾಗಿ ಅತ್ಯಂತ ಮೆಚ್ಚುಗೆ ಪಡೆದ ನಗರ ಯೋಜನಾ ಸಂಸ್ಥೆಯ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ.

ವ್ಯಾಪಾರ ಅಭಿವೃದ್ಧಿ ಮತ್ತು ಕಾರ್ಪೊರೇಟ್ ಸಂವಹನಗಳ ನಿರ್ದೇಶಕ, ಅರ್ಬನ್ ಇನ್ಫ್ರಾ ಕಮ್ಯುನಿಕೇಷನ್ಸ್, ವಿನೋದ್ ಶಾ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಇದು ಪ್ರಶಸ್ತಿಗಳ ಎರಡನೇ ಆವೃತ್ತಿಯಾಗಿದೆ ಮತ್ತು ಮೊದಲನೆಯದನ್ನು 2020 ರಲ್ಲಿ ನಡೆಸಲಾಗಿತ್ತು. ಈ ಹಿಂದೆ ಮಾಡಿದ ಕೆಲಸದ ಆಧಾರದ ಮೇಲೆ ಐದು ಸದಸ್ಯರ ತಂಡು ವಿಜೇತರನ್ನು ಆಯ್ಕೆ ಮಾಡಿದೆ ಎಂದು ವಿವರಿಸಿದರು.

Published On - 1:07 pm, Mon, 7 November 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​