
ಬೆಂಗಳೂರು, ಅಕ್ಟೋಬರ್ 02: ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಇಂದು ವಿಜಯದಶಮಿ (vijayadashami). ದಸರಾ ಹಬ್ಬದ ಕೊನೆಯ ದಿನ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ದುರ್ಗಾದೇವಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಹೀಗಾಗಿ ನಗರ್ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ಮರುದಿನ ಬೆಳಗಿನ ಜಾವ 04 ಗಂಟೆವರೆಗೆ ಸಂಚಾರ ಮಾರ್ಪಾಡು (traffic advisory) ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/VRNaOLXPfg
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) October 1, 2025
ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್ಟನ್ ರಸ್ತೆ-ಅಣ್ಣಸ್ವಾಮಿ ಮೊದಲೀಯಾರ್ ರಸ್ತೆ, ಟ್ಯಾಂಕ್ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.