AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ

Traffic Advisory: ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ
ಬೆಂಗಳೂರು ಟ್ರಾಫಿಕ್​
ವಿವೇಕ ಬಿರಾದಾರ
|

Updated on: Oct 11, 2024 | 7:36 AM

Share

ಬೆಂಗಳೂರು, ಅಕ್ಟೋಬರ್​ 11: ನವರಾತ್ರಿಯ (Navaratri) ಕೊನೆ ದಿನ ದುರ್ಗದೇವಿ (Durgadevi) ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು (Bengaluru) ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ರವಿವಾರ (ಅ.13) ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಅಂದು ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 04:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧಿಸಿದ ರಸ್ತೆಗಳು

  1.  ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
  2. ತಿರುವಳ್ಳವರ್ ಪ್ರತಿಮೆ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಇದನ್ನೂ ಓದಿ: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು; ನಿಮ್ಮೂರಿಗೆ ಎಷ್ಟು ನೋಡಿ

ಪರ್ಯಾಯ ಮಾರ್ಗ

  1. ಕ್ಲಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್‌ನಿಂದ ಗುರುದ್ವಾರ ಜಂಕ್ಷನ್​ಲ್ಲಿ ಬಲ ತಿರುವು ಪಡೆದು ಗಂಗಾಧರ ಚೆಟ್ಟಿ ರಸ್ತೆ – ಡಿಕನ್ಸನ್ ರಸ್ತೆಯಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ – ವೀಲರ್ ರಸ್ತೆ ಕಡೆಗೆ ಹೋಗಬಹುದಾಗಿದೆ.
  2. ತಿರುವಳ್ಳವ‌ರ್ ಪ್ರೇಮ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಶೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕನ್ಸನ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿದೆ.

ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು:

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ – ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್ ಅನ್ನು ದಿನಾಂಕ: ಶನಿವಾರದಿಂದ ರವಿವಾರ ರಾತ್ರಿಯವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ