AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಬಳಿ ನುಗ್ಗಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಖಾಕಿ

ಗಣರಾಜ್ಯೋತ್ಸವ ಪರೇಡ್ ವೇಳೆ ಮೈಸೂರು ಮೂಲದ ಪರಶುರಾಮ್ ಎಂಬ ವ್ಯಕ್ತಿ ಕರ ಪತ್ರ ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಬಳಿ ನುಗ್ಗಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಖಾಕಿ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on:Jan 26, 2024 | 12:27 PM

Share

ಬೆಂಗಳೂರು, ಜ.26: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ (Siddaramaiah) ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ತಮ್ಮ KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Republic Day 2024: ಗಣರಾಜ್ಯೋತ್ಸವ: ಭಗವಂತ ರಾಮನಿಗೆ ಪ್ರಿಯವಾದ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಈ ಬಾರಿ 132 ಸಾಧಕರು ಪದ್ಮ ಪ್ರಶಸ್ತಿಗಳಿಗೆ ಆಯ್ಕೆ

ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರಪತಿಗಳು ಪದ್ಮಪ್ರಶ್ತಿಗಳನ್ನು ಘೋಷಿಸಿದ್ದಾರೆ. 5 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 110 ಪದ್ಮಶ್ರೀ ಸೇರಿದಂತೆ ಒಟ್ಟು 132 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಈ ಪೈಕಿ ಕರುನಾಡಿನ 9 ಸಾಧಕರಿಗೆ ಪದ್ಮಶ್ರೀ ಲಭಿಸಿದೆ. ಇನ್ನು ಕರ್ನಾಟಕದ 9 ಸಾಧಕರಿಗೆ ಪದ್ಮಶ್ರೀ, ಒಬ್ಬರಿಗೆ ಪದ್ಮಭೂಷಣ ಸಿಕ್ಕಿದೆ.

ಕರ್ನಾಟಕದ ಪದ್ಮಶ್ರೀ ಪುರಸ್ಕೃತರು?

  • ಸೋಮಣ್ಣ – ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ
  • ಪ್ರೇಮಾ ಧನರಾಜ್ – ಪ್ಲಾಸ್ಟಿಕ್ ಸರ್ಜನ್ & ಸಾಮಾಜಿಕ ಕಾರ್ಯಕರ್ತೆ
  • ರೋಹನ್‌ ಬೋಪಣ್ಣ-ಕ್ರೀಡೆ
  • ಅನುಪಮಾ ಹೊಸಕೆರೆ-ಕಲೆ
  • ಶ್ರೀಧರ್ ಮಾಕಂ ಕೃಷ್ಣಮೂರ್ತಿ-ಸಾಹಿತ್ಯ & ಶಿಕ್ಷಣ
  • ಕೆ.ಎಸ್‌. ರಾಜಣ್ಣ- ಸಮಾಜ ಸೇವೆ
  • ಚಂದ್ರಶೇಖರ್ ಸಿ ರಾಜಣ್ಣಾಚಾರ್-ಮೆಡಿಸಿನ್‌
  • ಶಶಿ ಸೋನಿ- ವ್ಯಾಪಾರ & ಉದ್ಯಮ

ಪದ್ಮವಿಭೂಷಣ (ಕರ್ನಾಟಕ)

ಇನ್ನು ಕರ್ನಾಟಕದ ಸೀತಾರಾಜಮ್ ಜಿಂದಾಲ್ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Fri, 26 January 24

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್