AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಕಿಯಾ ಮಾಲ್​ಗೆ ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ

ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್​ಗೆ ಶಾಪಿಂಗ್​ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ನಡೆದಿದೆ. ಸಧ್ಯ ತೀವ್ರ ನಿಗಾ ಘಟಕದಲ್ಲಿ ಡಾಟಿ ಸದಾನಂದಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಐಕಿಯಾ ಮಾಲ್​ಗೆ ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ
ಡಾಟಿ ಸದಾನಂದ ಗೌಡ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Aug 31, 2024 | 8:52 PM

Share

ಬೆಂಗಳೂರು, ಆ.31: ಶಾಪಿಂಗ್​ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್​ನಲ್ಲಿ ನಡೆದಿದೆ. ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಡಾಟಿ ಸದಾನಂದಗೌಡ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಕಾರು ಚಾಲಕ, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದೀಗ ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಇನ್ನು ಸದಾನಂದಗೌಡ ಜೊತೆಗೆ ದಾಸರಹಳ್ಳಿಯಲ್ಲಿ ಶಾಸಕ ಮುನಿರಾಜು ಹಾಗೂ ಸುಜಾತ ಮುನಿರಾಜು ಕೂಡ ಅಸ್ಪತ್ರೆಗೆ ಆಗಮಿಸಿದ್ದಾರೆ. ಸಧ್ಯ ತೀವ್ರ ನಿಗಾ ಘಟಕದಲ್ಲಿ ಡಾಟಿ ಸದಾನಂದಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಗೆ ಹೃದಯಾಘಾತ

ಗದಗ: ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕ ಬಸವರಾಜ ವಿಠ್ಠಲಾಪುರ ಎಂಬುವವರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಗದಗನಿಂದ ಧಾರವಾಡಕ್ಕೆ ಕೈದಿ ವರ್ಗಾವಣೆ ಮಾಡುವಾಗ ಧಾರವಾಡದ ಕೋರ್ಟ್ ಬಳಿ ಘಟನೆ ನಡೆದಿದೆ. ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡು ಕೂಡಲೇ ರಸ್ತೆ ಪಕ್ಕಕ್ಕೆ ವಾಹನ ನಿಲ್ಲಿಸಿ, ಕ್ಷಣಮಾತ್ರದಲ್ಲೇ‌ ಹೃದಯಾಘಾತವಾಗಿ‌ ಬಸವರಾಜ‌ ಕೊನೆಯುಸಿರೆಳೆದಿದ್ದಾರೆ. ಬಸವರಾಜ ಅಕಾಲಿಕ‌ ನಿಧನಕ್ಕೆ‌ ಗದಗ ಜಿಲ್ಲಾ ಪೊಲೀಸ್ ಸಂತಾಪ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Sat, 31 August 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್