AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ

ಕಂದಾಯ ಇಲಾಖೆಯ ಇ-ಖಾತಾ ವಿತರಣೆಯಲ್ಲಿನ ವಿಳಂಬ ಹಾಗೂ ಸಾರ್ವಜನಿಕರ ಗೊಂದಲ ನಿವಾರಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ 10 ಇ-ಖಾತಾ ಸೇವಾ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಸಮಸ್ಯೆ ಬಗೆಹರಿಸಲು ಆಡಿಟ್ ತಂಡ ರಚನೆ, ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಕೆ, ಮತ್ತು ಫೇಸ್‌ಲೆಸ್ ಇ-ಖಾತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಪರಿಹಾರ ನೀಡುವ ಪ್ರಯತ್ನವಾಗಿದೆ.

ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 06, 2025 | 6:35 PM

Share

ಬೆಂಗಳೂರು, ಡಿ.6: ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆಗಳು ಆಗುತ್ತಿದೆ. ಇದಕ್ಕೆ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಬೇರೆ ಬೇರೆ ಕ್ರಮಗಳನ್ನು ತಂದಿದೆ. ಇದರಿಂದ ಜನರಲ್ಲಿ ತುಂಬಾ ಗೊಂದಲ ಸೃಷ್ಟಿಯಾಗಿದೆ. ಈ ಸಮಸ್ಯೆ ಪರಿಹಾರ ಮಾಡಲು 10 ಸೇವಾ ಕೇಂದ್ರ ಆರಂಭಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಇದುವರೆಗೂ 8.16 ಲಕ್ಷ ಇ-ಖಾತೆ ಮಾತ್ರ ನೀಡಲಾಗಿದೆ. ಇದೀಗ ಇದನ್ನು ವೇಗಗೊಳಿಸಲು 10ಕ್ಕೂ ಹೆಚ್ಚು ಸೇವಾಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ. ಇ-ಖಾತೆ ನೀಡುವುದರಲ್ಲಿ ಉಂಟಾದ ಸಮಸ್ಯೆ ಬಗೆಹರಿಸಲು ಆಡಿಟ್ ತಂಡ ರಚನೆ ಮಾಡಲಾಗಿದೆ. ಇ-ಖಾತೆ ರಿಜೆಕ್ಟ್ ಆದರೆ ತಂಡ ಮಾನಿಟರ್ ಮಾಡುತ್ತೆ ಎಂದು ಆಯುಕ್ತ ಮನೀಶ್ ಮೌದ್ಗಿಲ್ ಹೇಳಿದ್ದಾರೆ.

ಇ ಖಾತಾ ನೀಡಲು ತಡವಾಗುತ್ತಿರುವ ಕಾರಣ ಪಾಸ್ ಪೋರ್ಟ್ ಸೇವಾಕೇಂದ್ರ ರೀತಿಯಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು, ಇದರ ಜತೆಗೆ ಇ ಖಾತಾಗೆ ವೇಗ ನೀಡಲಾಗುವುದು ಎಂದು ಹೇಳಿದ್ದಾರೆ. ಇ ಖಾತಾ ನೀಡಲು ತಡವಾಗುತ್ತಿದೆ. ಹಾಗೂ ಸರಿಯಾದ ವ್ಯವಸ್ಥೆ ಇಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದರು. ಇದೀಗ ಅದನ್ನು ಪರಿಹಾರಿಸಲು ಈ ಕ್ರಮ ತರಲಾಗಿದೆ. ಜನ ಈ ಬಗ್ಗೆ ತಾಳ್ಮೆಯಿಂದ ಇರಬೇಕು ಎಂದು ಆಯುಕ್ತ ಮನವಿ ಮಾಡಿದ್ದಾರೆ. ಇನ್ನು ಬಿ ಟು ಎ ಖಾತಾ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ . ಈವರೆಗೂ 3252 ಅರ್ಜಿಗಳು ಮಾತ್ರ ಸ್ವೀಕಾರ ಮಾಡಿದ್ದೇವೆ. 8.21 ಲಕ್ಷ ಪೈಕಿ 8.16 ಲಕ್ಷ ಈ ಖಾತಾ ಅನುಮೋದನೆ ಆಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಹೇಳಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​​​ ಕೂಡ ಬೇಸರ ವ್ಯಕ್ತಪಡಿಸಿದ್ದರು. ಇದು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ ಎಂದು ಹೇಳಿದರು.

ಸ್ಮಾರ್ಟ್‌ಫೋನ್​ನಿಂದಲೇ ನೇರವಾಗಿ ಇ-ಖಾತಾ ಅರ್ಜಿ:

ಬೆಂಗಳೂರಿನಲ್ಲಿ ಇ-ಖಾತಾ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್, ಬೆಂಗಳೂರು ಒನ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳ ಮೂಲಕ ನಿರ್ವಹಿಸಲಾಗುತ್ತಿತ್ತು. ಇದೀಗ ಇಲ್ಲಿ ಆಗುವ ಸಮಸ್ಯೆಯನ್ನು ಪರಿಹಾರ ಮಾಡಲು ಹೊಸ ಅಪ್ಲಿಕೇಶನ್‌ನೊಂದಿಗೆ, ಆಸ್ತಿ ಮಾಲೀಕರು ಇನ್ಮುಂದೆ ತಮ್ಮ ಸ್ಮಾರ್ಟ್‌ಫೋನ್‌ಗಳಿಂದ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ ಈ ಬಗ್ಗೆ ಬೆಂಗಳೂರಿನ ಆಸ್ತಿ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಇ ಖಾತಾ ನೋಂದಣಿ ಅಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇ ಖಾತಾ ಮಾಹಿತಿ ನೀಡಲು ಬರಲಿದೆ ಮೊಬೈಲ್ ಆ್ಯಪ್!

ಫೇಸ್ ಲೆಸ್ ಇ-ಖಾತಾ:

ಇ-ಖಾತಾ (E-Khata) ನೋಂದಣಿಯಲ್ಲಿ ಆಗುತ್ತಿದ್ದ ಸಮಸ್ಯೆಗಳಿಗೆ ಕೊನೆಗೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಪರಿಹಾರ ನೀಡುವುದಕ್ಕೆ ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಮಾಡಿದೆ. ಫೇಸ್‌ಲೆಸ್, ಕಾಂಟ್ಯಾಕ್ಟ್-ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಜಾರಿ ಮಾಡಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಅಂತಿಮ ಇ-ಖಾತಾ ಅಥವಾ ಹೊಸ ಖಾತಾ ಅನುಮೋದಿಸಲು ಎಆರ್‌ಒ ಅಥವಾ ಕೇಸ್ ವರ್ಕರ್ ಆಸ್ತಿ ದಾಖಲೆಗಳನ್ನ ಮಾತ್ರ ಪರಿಶೀಲಿಸಬೇಕಾಗುತ್ತೆ.

ಲಕ್ಷ್ಮಿ ನರಸಿಂಹ

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ