AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ

ಕಂದಾಯ ಇಲಾಖೆಯ ಇ-ಖಾತಾ ವಿತರಣೆಯಲ್ಲಿನ ವಿಳಂಬ ಹಾಗೂ ಸಾರ್ವಜನಿಕರ ಗೊಂದಲ ನಿವಾರಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ 10 ಇ-ಖಾತಾ ಸೇವಾ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಸಮಸ್ಯೆ ಬಗೆಹರಿಸಲು ಆಡಿಟ್ ತಂಡ ರಚನೆ, ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಕೆ, ಮತ್ತು ಫೇಸ್‌ಲೆಸ್ ಇ-ಖಾತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಪರಿಹಾರ ನೀಡುವ ಪ್ರಯತ್ನವಾಗಿದೆ.

ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 06, 2025 | 6:35 PM

Share

ಬೆಂಗಳೂರು, ಡಿ.6: ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆಗಳು ಆಗುತ್ತಿದೆ. ಇದಕ್ಕೆ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಬೇರೆ ಬೇರೆ ಕ್ರಮಗಳನ್ನು ತಂದಿದೆ. ಇದರಿಂದ ಜನರಲ್ಲಿ ತುಂಬಾ ಗೊಂದಲ ಸೃಷ್ಟಿಯಾಗಿದೆ. ಈ ಸಮಸ್ಯೆ ಪರಿಹಾರ ಮಾಡಲು 10 ಸೇವಾ ಕೇಂದ್ರ ಆರಂಭಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಇದುವರೆಗೂ 8.16 ಲಕ್ಷ ಇ-ಖಾತೆ ಮಾತ್ರ ನೀಡಲಾಗಿದೆ. ಇದೀಗ ಇದನ್ನು ವೇಗಗೊಳಿಸಲು 10ಕ್ಕೂ ಹೆಚ್ಚು ಸೇವಾಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ. ಇ-ಖಾತೆ ನೀಡುವುದರಲ್ಲಿ ಉಂಟಾದ ಸಮಸ್ಯೆ ಬಗೆಹರಿಸಲು ಆಡಿಟ್ ತಂಡ ರಚನೆ ಮಾಡಲಾಗಿದೆ. ಇ-ಖಾತೆ ರಿಜೆಕ್ಟ್ ಆದರೆ ತಂಡ ಮಾನಿಟರ್ ಮಾಡುತ್ತೆ ಎಂದು ಆಯುಕ್ತ ಮನೀಶ್ ಮೌದ್ಗಿಲ್ ಹೇಳಿದ್ದಾರೆ.

ಇ ಖಾತಾ ನೀಡಲು ತಡವಾಗುತ್ತಿರುವ ಕಾರಣ ಪಾಸ್ ಪೋರ್ಟ್ ಸೇವಾಕೇಂದ್ರ ರೀತಿಯಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು, ಇದರ ಜತೆಗೆ ಇ ಖಾತಾಗೆ ವೇಗ ನೀಡಲಾಗುವುದು ಎಂದು ಹೇಳಿದ್ದಾರೆ. ಇ ಖಾತಾ ನೀಡಲು ತಡವಾಗುತ್ತಿದೆ. ಹಾಗೂ ಸರಿಯಾದ ವ್ಯವಸ್ಥೆ ಇಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದರು. ಇದೀಗ ಅದನ್ನು ಪರಿಹಾರಿಸಲು ಈ ಕ್ರಮ ತರಲಾಗಿದೆ. ಜನ ಈ ಬಗ್ಗೆ ತಾಳ್ಮೆಯಿಂದ ಇರಬೇಕು ಎಂದು ಆಯುಕ್ತ ಮನವಿ ಮಾಡಿದ್ದಾರೆ. ಇನ್ನು ಬಿ ಟು ಎ ಖಾತಾ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ . ಈವರೆಗೂ 3252 ಅರ್ಜಿಗಳು ಮಾತ್ರ ಸ್ವೀಕಾರ ಮಾಡಿದ್ದೇವೆ. 8.21 ಲಕ್ಷ ಪೈಕಿ 8.16 ಲಕ್ಷ ಈ ಖಾತಾ ಅನುಮೋದನೆ ಆಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಹೇಳಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​​​ ಕೂಡ ಬೇಸರ ವ್ಯಕ್ತಪಡಿಸಿದ್ದರು. ಇದು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ ಎಂದು ಹೇಳಿದರು.

ಸ್ಮಾರ್ಟ್‌ಫೋನ್​ನಿಂದಲೇ ನೇರವಾಗಿ ಇ-ಖಾತಾ ಅರ್ಜಿ:

ಬೆಂಗಳೂರಿನಲ್ಲಿ ಇ-ಖಾತಾ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್, ಬೆಂಗಳೂರು ಒನ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳ ಮೂಲಕ ನಿರ್ವಹಿಸಲಾಗುತ್ತಿತ್ತು. ಇದೀಗ ಇಲ್ಲಿ ಆಗುವ ಸಮಸ್ಯೆಯನ್ನು ಪರಿಹಾರ ಮಾಡಲು ಹೊಸ ಅಪ್ಲಿಕೇಶನ್‌ನೊಂದಿಗೆ, ಆಸ್ತಿ ಮಾಲೀಕರು ಇನ್ಮುಂದೆ ತಮ್ಮ ಸ್ಮಾರ್ಟ್‌ಫೋನ್‌ಗಳಿಂದ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ ಈ ಬಗ್ಗೆ ಬೆಂಗಳೂರಿನ ಆಸ್ತಿ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಇ ಖಾತಾ ನೋಂದಣಿ ಅಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇ ಖಾತಾ ಮಾಹಿತಿ ನೀಡಲು ಬರಲಿದೆ ಮೊಬೈಲ್ ಆ್ಯಪ್!

ಫೇಸ್ ಲೆಸ್ ಇ-ಖಾತಾ:

ಇ-ಖಾತಾ (E-Khata) ನೋಂದಣಿಯಲ್ಲಿ ಆಗುತ್ತಿದ್ದ ಸಮಸ್ಯೆಗಳಿಗೆ ಕೊನೆಗೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಪರಿಹಾರ ನೀಡುವುದಕ್ಕೆ ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಮಾಡಿದೆ. ಫೇಸ್‌ಲೆಸ್, ಕಾಂಟ್ಯಾಕ್ಟ್-ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಜಾರಿ ಮಾಡಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಅಂತಿಮ ಇ-ಖಾತಾ ಅಥವಾ ಹೊಸ ಖಾತಾ ಅನುಮೋದಿಸಲು ಎಆರ್‌ಒ ಅಥವಾ ಕೇಸ್ ವರ್ಕರ್ ಆಸ್ತಿ ದಾಖಲೆಗಳನ್ನ ಮಾತ್ರ ಪರಿಶೀಲಿಸಬೇಕಾಗುತ್ತೆ.

ಲಕ್ಷ್ಮಿ ನರಸಿಂಹ

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು