AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ ಖಾತಾ ಮಾಡಿಸಲು ಸೂಚನೆ ನೀಡಿದ್ದ ಬಿಬಿಎಂಪಿ, ಇದೀಗ ಜುಲೈ 1 ರಿಂದ ಕಟ್ಟಡ ನಕ್ಷೆ ಮಂಜೂರು ಮಾಡಲು ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಇನ್ಮುಂದೆ ಆನ್​​ಲೈನ್​​ನಲ್ಲಿ ನಂಬಿಕೆ ನಕ್ಷೆ ಪಡೆಯುವುದರಿಂದ ಹಿಡಿದು ಅರ್ಜಿ ಸಲ್ಲಿಕೆ ಮಾಡುವುದಕ್ಕೂ ಇ ಖಾತಾ ಕಡ್ಡಾಯಗೊಳಿಸಿರುವ ಪಾಲಿಕೆ, ಇ ಖಾತಾ ಇಲ್ಲದಿದ್ರೆ ಕಟ್ಟಡ ನಕ್ಷೆ ಸಿಗಲಾರದು ಎಂದು ಎಚ್ಚರಿಕೆ ನೀಡಿದೆ.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jun 12, 2025 | 7:47 AM

Share

ಬೆಂಗಳೂರು, ಜೂನ್ 12: ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಇನ್ಮುಂದೆ ಇ ಖಾತಾ (E Khata) ಕಡ್ಡಾಯ ಎಂದು ಬಿಬಿಎಂಪಿ (BBMP) ಆದೇಶ ಹೊರಡಿಸಿದೆ. ಜುಲೈ 1ರಿಂದ ಕಟ್ಟಡ ನಿರ್ಮಾಣ ನಕ್ಷೆ ಪಡೆಯಬೇಕಿದ್ದರೆ ಇ ಖಾತಾ ಸಲ್ಲಿಸುವುದು ಕಡ್ಡಾಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಆದೇಶದಂತೆ ಅನಧಿಕೃತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಶಾಕ್ ನೀಡಿದ್ದ ಪಾಲಿಕೆ, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಇ ಖಾತಾ ಕಡ್ಡಾಯ ಮಾಡಿ ಮತ್ತೊಂದು ಶಾಕ್ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್​ಲೈನ್ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಮೊದಲು ಇ-ಖಾತಾ ಪಡೆದಿರಬೇಕು.ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತ ಈಗಾಗಲೇ ಕೇವಲ 5 ಲಕ್ಷ ಇ ಖಾತಾ ಮಾತ್ರ ವಿತರಣೆಯಾಗಿದ್ದು, ಇನ್ನೂ ಲಕ್ಷಾಂತರ ಮಾಲೀಕರು ಇ ಖಾತಾ ಪಡೆಯಬೇಕಿದೆ. ಈ ಮಧ್ಯೆ ಬಿಬಿಎಂಪಿಯ ಈ ಆದೇಶಕ್ಕೆ ಆಸ್ತಿ ಮಾಲೀಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಇದನ್ನೂ ಓದಿ
Image
50 ಕೋಟಿ ರೂ.ಸಾಲ ಕೊಡಿಸುವುದಾಗಿ ಮಹಿಳೆಗೆ ಕೋಟಾ ನೋಟು ಕೊಟ್ಟ ಮಹಮ್ಮದ್
Image
ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Image
ಬಾಕಿ ಉಳಿದಿದ್ದ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನ ನೇಮಿಸಿದ ಬಿಜೆಪಿ
Image
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ

ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 5 ಲಕ್ಷ ಇ ಖಾತಾ ವಿತರಣೆಯಾಗಿದೆ. ಇದೀಗ 25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್​​ಲೈನ್​ನಲ್ಲಿ ಲಭ್ಯವಿವೆ. ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಆದರೆ, ಇದೀಗ ಜುಲೈ 1 ರಿಂದಲೇ ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿರುವುದು ಆಸ್ತಿ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. ಸದ್ಯ, ಇ ಖಾತಾ ಕಡ್ಡಾಯಕ್ಕೆ ದಿಢೀರ್ ಆದೇಶ ಹೊರಡಿಸಿರುವ ಪಾಲಿಕೆ, ಕಾಲಾವಧಿ ಮುಂದೂಡಿಕೆ ಮಾಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 12 June 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!