AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ ಖಾತಾ ಮಾಡಿಸಲು ಸೂಚನೆ ನೀಡಿದ್ದ ಬಿಬಿಎಂಪಿ, ಇದೀಗ ಜುಲೈ 1 ರಿಂದ ಕಟ್ಟಡ ನಕ್ಷೆ ಮಂಜೂರು ಮಾಡಲು ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಇನ್ಮುಂದೆ ಆನ್​​ಲೈನ್​​ನಲ್ಲಿ ನಂಬಿಕೆ ನಕ್ಷೆ ಪಡೆಯುವುದರಿಂದ ಹಿಡಿದು ಅರ್ಜಿ ಸಲ್ಲಿಕೆ ಮಾಡುವುದಕ್ಕೂ ಇ ಖಾತಾ ಕಡ್ಡಾಯಗೊಳಿಸಿರುವ ಪಾಲಿಕೆ, ಇ ಖಾತಾ ಇಲ್ಲದಿದ್ರೆ ಕಟ್ಟಡ ನಕ್ಷೆ ಸಿಗಲಾರದು ಎಂದು ಎಚ್ಚರಿಕೆ ನೀಡಿದೆ.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jun 12, 2025 | 7:47 AM

Share

ಬೆಂಗಳೂರು, ಜೂನ್ 12: ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಇನ್ಮುಂದೆ ಇ ಖಾತಾ (E Khata) ಕಡ್ಡಾಯ ಎಂದು ಬಿಬಿಎಂಪಿ (BBMP) ಆದೇಶ ಹೊರಡಿಸಿದೆ. ಜುಲೈ 1ರಿಂದ ಕಟ್ಟಡ ನಿರ್ಮಾಣ ನಕ್ಷೆ ಪಡೆಯಬೇಕಿದ್ದರೆ ಇ ಖಾತಾ ಸಲ್ಲಿಸುವುದು ಕಡ್ಡಾಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಆದೇಶದಂತೆ ಅನಧಿಕೃತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಶಾಕ್ ನೀಡಿದ್ದ ಪಾಲಿಕೆ, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಇ ಖಾತಾ ಕಡ್ಡಾಯ ಮಾಡಿ ಮತ್ತೊಂದು ಶಾಕ್ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್​ಲೈನ್ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಮೊದಲು ಇ-ಖಾತಾ ಪಡೆದಿರಬೇಕು.ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತ ಈಗಾಗಲೇ ಕೇವಲ 5 ಲಕ್ಷ ಇ ಖಾತಾ ಮಾತ್ರ ವಿತರಣೆಯಾಗಿದ್ದು, ಇನ್ನೂ ಲಕ್ಷಾಂತರ ಮಾಲೀಕರು ಇ ಖಾತಾ ಪಡೆಯಬೇಕಿದೆ. ಈ ಮಧ್ಯೆ ಬಿಬಿಎಂಪಿಯ ಈ ಆದೇಶಕ್ಕೆ ಆಸ್ತಿ ಮಾಲೀಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಇದನ್ನೂ ಓದಿ
Image
50 ಕೋಟಿ ರೂ.ಸಾಲ ಕೊಡಿಸುವುದಾಗಿ ಮಹಿಳೆಗೆ ಕೋಟಾ ನೋಟು ಕೊಟ್ಟ ಮಹಮ್ಮದ್
Image
ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Image
ಬಾಕಿ ಉಳಿದಿದ್ದ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನ ನೇಮಿಸಿದ ಬಿಜೆಪಿ
Image
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ

ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 5 ಲಕ್ಷ ಇ ಖಾತಾ ವಿತರಣೆಯಾಗಿದೆ. ಇದೀಗ 25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್​​ಲೈನ್​ನಲ್ಲಿ ಲಭ್ಯವಿವೆ. ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಆದರೆ, ಇದೀಗ ಜುಲೈ 1 ರಿಂದಲೇ ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿರುವುದು ಆಸ್ತಿ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. ಸದ್ಯ, ಇ ಖಾತಾ ಕಡ್ಡಾಯಕ್ಕೆ ದಿಢೀರ್ ಆದೇಶ ಹೊರಡಿಸಿರುವ ಪಾಲಿಕೆ, ಕಾಲಾವಧಿ ಮುಂದೂಡಿಕೆ ಮಾಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 12 June 25

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?