AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ ಖಾತಾ ಮಾಡಿಸಲು ಸೂಚನೆ ನೀಡಿದ್ದ ಬಿಬಿಎಂಪಿ, ಇದೀಗ ಜುಲೈ 1 ರಿಂದ ಕಟ್ಟಡ ನಕ್ಷೆ ಮಂಜೂರು ಮಾಡಲು ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಇನ್ಮುಂದೆ ಆನ್​​ಲೈನ್​​ನಲ್ಲಿ ನಂಬಿಕೆ ನಕ್ಷೆ ಪಡೆಯುವುದರಿಂದ ಹಿಡಿದು ಅರ್ಜಿ ಸಲ್ಲಿಕೆ ಮಾಡುವುದಕ್ಕೂ ಇ ಖಾತಾ ಕಡ್ಡಾಯಗೊಳಿಸಿರುವ ಪಾಲಿಕೆ, ಇ ಖಾತಾ ಇಲ್ಲದಿದ್ರೆ ಕಟ್ಟಡ ನಕ್ಷೆ ಸಿಗಲಾರದು ಎಂದು ಎಚ್ಚರಿಕೆ ನೀಡಿದೆ.

ಕಟ್ಟಡ ನಕ್ಷೆಗೆ ಇನ್ಮುಂದೆ ಇ ಖಾತಾ ಕಡ್ಡಾಯ: ಬಿಬಿಎಂಪಿ ನಡೆಗೆ ಆಸ್ತಿ ಮಾಲೀಕರು ಕಂಗಾಲು
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jun 12, 2025 | 7:47 AM

Share

ಬೆಂಗಳೂರು, ಜೂನ್ 12: ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಇನ್ಮುಂದೆ ಇ ಖಾತಾ (E Khata) ಕಡ್ಡಾಯ ಎಂದು ಬಿಬಿಎಂಪಿ (BBMP) ಆದೇಶ ಹೊರಡಿಸಿದೆ. ಜುಲೈ 1ರಿಂದ ಕಟ್ಟಡ ನಿರ್ಮಾಣ ನಕ್ಷೆ ಪಡೆಯಬೇಕಿದ್ದರೆ ಇ ಖಾತಾ ಸಲ್ಲಿಸುವುದು ಕಡ್ಡಾಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಆದೇಶದಂತೆ ಅನಧಿಕೃತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಶಾಕ್ ನೀಡಿದ್ದ ಪಾಲಿಕೆ, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಇ ಖಾತಾ ಕಡ್ಡಾಯ ಮಾಡಿ ಮತ್ತೊಂದು ಶಾಕ್ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್​ಲೈನ್ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಮೊದಲು ಇ-ಖಾತಾ ಪಡೆದಿರಬೇಕು.ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತ ಈಗಾಗಲೇ ಕೇವಲ 5 ಲಕ್ಷ ಇ ಖಾತಾ ಮಾತ್ರ ವಿತರಣೆಯಾಗಿದ್ದು, ಇನ್ನೂ ಲಕ್ಷಾಂತರ ಮಾಲೀಕರು ಇ ಖಾತಾ ಪಡೆಯಬೇಕಿದೆ. ಈ ಮಧ್ಯೆ ಬಿಬಿಎಂಪಿಯ ಈ ಆದೇಶಕ್ಕೆ ಆಸ್ತಿ ಮಾಲೀಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಇದನ್ನೂ ಓದಿ
Image
50 ಕೋಟಿ ರೂ.ಸಾಲ ಕೊಡಿಸುವುದಾಗಿ ಮಹಿಳೆಗೆ ಕೋಟಾ ನೋಟು ಕೊಟ್ಟ ಮಹಮ್ಮದ್
Image
ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Image
ಬಾಕಿ ಉಳಿದಿದ್ದ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನ ನೇಮಿಸಿದ ಬಿಜೆಪಿ
Image
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ

ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 5 ಲಕ್ಷ ಇ ಖಾತಾ ವಿತರಣೆಯಾಗಿದೆ. ಇದೀಗ 25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್​​ಲೈನ್​ನಲ್ಲಿ ಲಭ್ಯವಿವೆ. ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಆದರೆ, ಇದೀಗ ಜುಲೈ 1 ರಿಂದಲೇ ಇ ಖಾತಾ ಕಡ್ಡಾಯ ಮಾಡಿ ಆದೇಶ ಹೊರಡಿಸಿರುವುದು ಆಸ್ತಿ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. ಸದ್ಯ, ಇ ಖಾತಾ ಕಡ್ಡಾಯಕ್ಕೆ ದಿಢೀರ್ ಆದೇಶ ಹೊರಡಿಸಿರುವ ಪಾಲಿಕೆ, ಕಾಲಾವಧಿ ಮುಂದೂಡಿಕೆ ಮಾಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 12 June 25

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ