ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಾಹಿತಿ ನೀಡಲು ನಿರಾಕರಿಸಿದ ಜಿ-ಮೇಲ್ ಕಂಪನಿ

ಡಿಸೆಂಬರ್​ನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ಕೆಲ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು. ಈ ಸಂಬಂಧ VPN ಹಾಗೂ IP ಅಡ್ರೆಸ್ ಪತ್ತೆ ಮಾಡಿ ನಗರ ಪೊಲೀಸರು ಈ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಇಂಟರ್ ಪೋಲ್ ಗೆ ಪತ್ರ ಬರೆದು ಜಿ-ಮೇಲ್​ಗೆ ಮಾಹಿತಿ ನೀಡಲು ಕೇಳಿಕೊಂಡಿದ್ದು ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ.

ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಾಹಿತಿ ನೀಡಲು ನಿರಾಕರಿಸಿದ ಜಿ-ಮೇಲ್ ಕಂಪನಿ
ಜಿ-ಮೇಲ್
Follow us
| Updated By: ಆಯೇಷಾ ಬಾನು

Updated on: Feb 18, 2024 | 10:52 AM

ಬೆಂಗಳೂರು, ಫೆ.18: ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರಿಗೆ (Bengaluru Police) ಹಿನ್ನಡೆಯಾಗಿದೆ. ಇ-ಮೇಲ್ (E-Mail) ಬೆದರಿಕೆ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಕ್ಕೆ ಜಿ-ಮೇಲ್ (G-Mail)​​ ಕಂಪನಿ ನಿರಾಕರಿಸಿದೆ. ಜಿ-ಮೇಲ್ ಕಂಪನಿಗೆ ಮಾಹಿತಿ ನೀಡಲು ಇಂಟರ್​ ಪೋಲ್ ಸೂಚನೆ ನೀಡಿತ್ತು. ಆದರೆ ಇಂಟರ್ ಪೋಲ್ ನೋಟಿಸ್​ಗೂ ಕ್ಯಾರೇ ಎನ್ನದೆ ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ. ಬಳಕೆದಾರರ ಮಾಹಿತಿ ಗೌಪ್ಯವಾಗಿಡುವುದು ನಮ್ಮ ಕರ್ತವ್ಯ. ಮಾಹಿತಿ ನೀಡಲ್ಲ ಎಂದಿದೆ. ಇದರಿಂದ ಬಾಂಬ್ ಬೆದರಿಕೆ ಪ್ರಕರಣ ಸಂಬಂಧ ತನಿಖೆ ನಡೆಸಲು ಪೊಲೀಸರಿಗೆ ಸಮಸ್ಯೆ ಎದುರಾಗಿದೆ.

ಡಿಸೆಂಬರ್​ನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ನಗರ ಹಾಗೂ ಗ್ರಾಮಾಂತರ ಸೇರಿ ಒಟ್ಟು 70 ಶಾಲೆಗಳಿಗೆ ಕಿಡಿಗೇಡಿಗಳೂ ಬಾಂಬ್ ಬೆದರಿಕೆ ಹಾಕಿ ಇ-ಮೇಲ್ ಮಾಡಿದ್ದರು. ಈ ಸಂಬಂಧ ಆಯಾ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಪಿಎನ್ ಹಾಗೂ ಐಪಿ ಅಡ್ರೆಸ್ ಪತ್ತೆ ಮಾಡಿದ್ದ ನಗರ ಪೊಲೀಸರು ಈ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಇಂಟರ್ ಪೋಲ್ ಗೆ ಪತ್ರ ಬರೆದಿದ್ದರು.

ಪೊಲೀಸರ ಪತ್ರಕ್ಕೆ ಸ್ಪಂದಿಸಿದ ಇಂಟರ್ ಪೋಲ್, ಜಿ-ಮೇಲ್ ಕಂಪನಿಗೆ ಮಾಹಿತಿ ನೀಡಲು ನೋಟಿಸ್ ನೀಡಿತ್ತು. ಆದರೆ ಇಂಟರ್ ಪೋಲ್ ನೋಟಿಸ್​ಗೂ ಕ್ಯಾರೇ ಎನ್ನದ ಜಿ-ಮೇಲ್ ಕಂಪನಿ ಮಾಹಿತಿ ನೀಡಲು ನಿರಾಕರಿಸಿದೆ. 2022ರಲ್ಲಿ ಕೂಡ ಮಾಹಿತಿ ನೀಡುವಂತೆ ಇಂಟರ್ ಪೋಲ್ ನೋಟಿಸ್ ನೀಡಿತ್ತು. ಆಗ ಕೂಡ ಮಾಹಿತಿ ನೀಡಲು ನಿರಾಕರಿಸಿತ್ತು. ಬಳಕೆದಾರರ ಮಾಹಿತಿಯನ್ನ ಗೌಪ್ಯವಾಗಿಡುವುದು ಕಂಪನಿಯ ಕರ್ತವ್ಯ. ಹೀಗಾಗಿ ಯಾವುದೇ ಮಾಹಿತಿ ನೀಡೋದಿಲ್ಲ ಎಂದು ಜಿ-ಮೇಲ್ ಕಂಪನಿ ಉತ್ತರಿಸಿದೆ.

ಇದನ್ನೂ ಓದಿ: ಬಾಂಬ್ ಬೆದರಿಕೆ ಕರೆಗಳು ಬಂದರೆ ಭಯ ಪಡಬೇಡಿ, ಈ ಕೆಲಸವನ್ನು ಮೊದಲು ಮಾಡಿ

ಬಳಕೆದಾರರ ವೈಯಕ್ತಿಕ ಮಾಹಿತಿ ಗೋಪ್ಯವಾಗಿಡುವುದು ಕಂಪನಿಯ ಧ್ಯೇಯ. ಯಾವುದೇ ಕಾರಣಕ್ಕೂ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಮಾಹಿತಿ ಹಂಚಿಕೆ ಸಂಬಂಧ ಯಾವುದೇ ಕಾನೂನುಗಳು ಕಂಪನಿಗೆ ಅನ್ವಯವಾಗುವುದಿಲ್ಲ ಎಂದು ಜಿ-ಮೇಲೆ ಕಂಪನಿ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಈ ಹಿಂದೆ 2022ರ ಏಪ್ರಿಲ್ 8ರಂದು ನಗರದ 16 ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆ ನಡೆಸಿದ್ದ ಪೊಲೀಸರು, ವಿದೇಶದಿಂದ ಇ–ಮೇಲ್ ಬಂದಿದ್ದನ್ನು ಪತ್ತೆ ಮಾಡಿ ಕಂಪನಿಯಿಂದ ಮಾಹಿತಿ ಕೋರಿದ್ದರು. ಅವಾಗಲೂ ಕಂಪನಿಯಿಂದ ಯಾವುದೇ ಉತ್ತರ ಬಂದಿರಲಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು