AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹ್ಯಾಕ್ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ವಂಚನೆ ಮಾಡಿದ್ದ ಕೇಸ್​ಗೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹ್ಯಾಕ್ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Oct 07, 2023 | 11:02 AM

Share

ಬೆಂಗಳೂರು, ಅ.07: ಬಿಟ್‌ಕಾಯಿನ್ ಹಗರಣದ (Bitcoin Case) ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು (CID Police), ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ವಂಚನೆ ಮಾಡಿದ್ದ ಕೇಸ್​ಗೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.

ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 11.5 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ಶ್ರೀಕಿ ಆ ಹಣವನ್ನು ಉತ್ತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಈ ಬಗ್ಗೆ ಪೊಲೀಸರಿಗೆ ಗೊತ್ತಾಗುವಷ್ಟರಲ್ಲೇ ಹವಾಲ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳು ಬೆಂಗಳೂರಿಗೆ ಹವಾಲ ರೂಪದಲ್ಲಿ ಹಣ ತಲುಪಿಸಿದ್ದರು. ಪಂಜಾಬ್ ಮೂಲದ ಆರೋಪಿ ಹರ್ವಿಂದರ್ ಸಿಂಗ್, ಹವಾಲ ಮೂಲಕ ಹಣ ವರ್ಗಾವಣೆ ಮಾಡೊಕೆ ಸಹಾಯ ಮಾಡಿದ್ದ. ಆದರೆ ಎಸ್​ಐಟಿ ತನಿಖೆ ವೇಳೆ ಬಿಟ್ ಕಾಯಿನ್ ಕೇಸ್​ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿತ್ತು. ಸದ್ಯ ಪ್ರಕರಣದ ತನಿಖಾ ಹಂತದಲ್ಲಿ ಮತ್ತಿಬ್ಬರ ಬಂಧನವಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿಸಲ್ಪಟ್ಟ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ, ಎಸ್​ಐಟಿಯಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಇನ್ನು ಮತ್ತೊಂದೆಡೆ ಬಿಟ್ ಕಾಯಿನ್ ಕೇಸ್​ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿದ್ದು ಇ-ಪ್ರೊಕ್ಯೂರ್‌ಮೆಂಟ್‌ ವೆಬ್‌ಸೈಟ್ ಹ್ಯಾಕ್ ಪ್ರಕರಣದಲ್ಲಿ ಹರ್ವೀಂದರ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಈ ಆರೋಪಿಗಳು ಸಹಾಯ ಮಾಡಿದ್ದರು ಎನ್ನಲಾಗುತ್ತಿದೆ. ಸದ್ಯ ಹರ್ವೀಂದರ್ ಸಿಂಗ್‌ನನ್ನು ಬಂಧಿಸಿ SIT ಹೆಚ್ಚಿನ ವಿಚಾರಣೆ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ 7 ಕಡೆ SIT ದಾಳಿ

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ 7 ಕಡೆ SIT ದಾಳಿ ನಡೆದಿದೆ. ​ಬೆಂಗಳೂರಿನ ಬೊಮ್ಮನಹಳ್ಳಿ, ಕೋರಮಂಗಲ ಸೇರಿದಂತೆ ಏಳು ಕಡೆ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಎಸ್​ಐಟಿ ಪರಿಶೀಲನೆ ನಡೆಸಿದೆ. ಈ ಹಿಂದೆ ಬಿಟ್ ಕಾಯಿನ್ ಕೇಸ್‌ನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಒಟ್ಟು ಐವರಿಗೆ ಸಂಬಂಧಿಸಿದಂತೆ ಏಳು ಕಡೆ ದಾಳಿ ನಡೆದಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ