AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

ಆತಂಕ ಸೃಷ್ಟಿಸಿರುವ ಎಬೋಲಾ ವೈರಸ್​ ಸದ್ಯ ರಾಜಧಾನಿಗೂ ಕಾಲಿಟ್ಟಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಏಕೆಂದರೆ ಉಗಾಂಡಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಯಲ್ಲಿ ಎಬೋಲಾ ವೈರಸ್ ರೋಗ ಪತ್ತೆ ಶಂಕೆ ವ್ಯಕ್ತವಾಗಿದೆ. ಸದ್ಯ ಮಹಿಳೆಯನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಆರೋಗ್ಯ ಇಲಾಖೆ ವರದಿಗಾಗಿ ಕಾಯುತ್ತಿದೆ.

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ
ಎಬೋಲಾ ವೈರಸ್Image Credit source: tv9 kannada
Vinay Kashappanavar
| Edited By: |

Updated on:May 26, 2026 | 7:58 PM

Share

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಮುಖ್ಯಾಂಶಗಳು

  • ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?
  • ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ
  • 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ

ಹೋಟೆಲ್‌ನಿಂದ ಐಸೋಲೇಷನ್‌ಗೆ ಶಿಫ್ಟ್

ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ, ಕಳೆದ ಮೇ 23ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ ಬೂಟಿಕ್’ ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ತಂಗಿದ್ದರು. ಮಹಿಳೆಗೆ ಎಬೋಲಾ ಮಾದರಿಯ ಆರೋಗ್ಯ ಸಮಸ್ಯೆಗಳು ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ, ತಕ್ಷಣವೇ ಆದೇಶ ಹೊರಡಿಸಿ ಇಂದು ಆಂಬುಲೆನ್ಸ್ ಮೂಲಕ ಅವರನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪುಣೆ ಲ್ಯಾಬ್ ವರದಿಗಾಗಿ ಕಾಯುತ್ತಿರುವ ಆರೋಗ್ಯ ಇಲಾಖೆ

ಶಂಕಿತ ಮಹಿಳೆಯಿಂದ ಮೇ 25ರಂದೇ ರಕ್ತ ಹಾಗೂ ಇತರ ಅಗತ್ಯ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಸ್ಯಾಂಪಲ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ವರದಿ ಬಂದ ಬಳಿಕವಷ್ಟೇ ಮಹಿಳೆಗೆ ಎಬೋಲಾ ಸೋಂಕು ತಗುಲಿದೆಯೇ ಇಲ್ಲವೇ ಎಂಬುದು ಅಧಿಕೃತವಾಗಿ ದೃಢವಾಗಲಿದೆ. ನಾಳೆಯೊಳಗೆ ವರದಿ ಕೈಸೇರಲಿದೆ ಎಂದು ಆರೋಗ್ಯ ಇಲಾಖೆಯಿಂದ ಟಿವಿ9ಗೆ ಮಾಹಿತಿ ನೀಡಲಾಗಿದೆ. ವರದಿ ಬಳಿಕ ಸೂಕ್ತ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಲಿದೆ.

21 ದಿನ ಕ್ವಾರಂಟೈನ್​

ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬಂದವರಿಗೆ ಕ್ವಾರಂಟೈನ್​ನಲ್ಲಿಡಲು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್​ನಲ್ಲಿಡಲು ಸರ್ಕಾರ ನಿರ್ಧರಿಸಿತ್ತು. ರೋಗಲಕ್ಷಣ ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ವರದಿ ನೀಡಲು ಸೂಚಿಸಲಾಗಿತ್ತು. ಜತೆಗೆ IDSP ಅಡಿಯಲ್ಲಿ ತೀವ್ರ ನಿಗಾ ವ್ಯವಸ್ಥೆ ಮತ್ತು ಅನುಮಾನಾಸ್ಪದ ಪ್ರಕರಣಗಳ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ವಿಮಾನ ನಿಲ್ದಾಣಗಳು ಮತ್ತು ಪ್ರವೇಶ ಕೇಂದ್ರಗಳ ಸಮನ್ವಯ ವ್ಯವಸ್ಥೆ ಕಲ್ಪಿಸುವುದು, ಪ್ರತ್ಯೇಕ ಕ್ವಾರಂಟೈನ್ ಮತ್ತು ಐಸೋಲೇಷನ್ ಸೌಲಭ್ಯಗಳು ಹಾಗೂ ರೆಫರಲ್ ಆಂಬುಲೆನ್ಸ್ ವ್ಯವಸ್ಥೆಗೂ ಸೂಚಿಸಲಾಗಿದೆ. ಆರೋಗ್ಯ ಸಿಬ್ಬಂದಿಗೆ ತರಬೇತಿ ಹಾಗೂ ಸೋಂಕು ನಿಯಂತ್ರಣ ಕ್ರಮಗಳ ಬಲಪಡಿಸುವಿಕೆಗೆ ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Tue, 26 May 26

Follow Us
Vinay Kashappanavar
Vinay Kashappanavar
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್