AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮತಕ್ಕಾಗಿ ಉಡುಗೊರೆ ತಡೆಯಲು ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ರಾಜಕಾರಣಿಗಳು ಮತದಾರರಿಗೆ ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದನ್ನು ತಡೆಯುವುದಕ್ಕಾಗಿ ಮತ್ತು ಪರಿಶೀಲಿಸಲು ಸಹಾಯಕ ವೆಚ್ಚ ವೀಕ್ಷಕರ ನೇಮಕ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Bengaluru: ಮತಕ್ಕಾಗಿ ಉಡುಗೊರೆ ತಡೆಯಲು ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ
ತುಷಾರ್ ಗಿರಿನಾಥ್
ಗಣಪತಿ ಶರ್ಮಾ
|

Updated on: Mar 29, 2023 | 8:50 PM

Share

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ದಿನಾಂಕಗಳನ್ನು ಬುಧವಾರ ಪ್ರಕಟಿಸಿದೆ. ಇದಾದ ಕೆಲವೇ ಗಂಟೆಗಳ ನಂತರ ಹೇಳಿಕೆ ನೀಡಿರುವ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ (ಬಿಬಿಎಂಪಿ ಆಯುಕ್ತ) ತುಷಾರ್ ಗಿರಿನಾಥ್, ಮೇ 10 ರಂದು ನಿಗದಿಯಾಗಿರುವ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜಕಾರಣಿಗಳು ಮತದಾರರಿಗೆ ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದನ್ನು ತಡೆಯುವುದಕ್ಕಾಗಿ ಮತ್ತು ಪರಿಶೀಲಿಸಲು ಸಹಾಯಕ ವೆಚ್ಚ ವೀಕ್ಷಕರ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಖರ್ಚುಗಳನ್ನು ಮೇಲ್ವಿಚಾರಣೆ ಮಾಡಲು ವಿವಿಧ ಕ್ಷೇತ್ರಗಳಲ್ಲಿ ಹಲವಾರು ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೂತ್‌ಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆ ಎಂದು ವಿಂಗಡಿಸಿದ್ದೇವೆ. ಬ್ಯಾಟರಾಯನಪುರದಲ್ಲಿ 3 ಕೋಟಿ ರೂ. ಮೌಲ್ಯದ ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ವೆಚ್ಚ ಸೂಕ್ಷ್ಮ (ಮತಕ್ಕಾಗಿ ಮತದಾರರಿಗೆ ಹೆಚ್ಚು ಆಮಿಷ ನೀಡುವುದಕ್ಕೆ ಸಂಬಂಧಿಸಿ) ಪ್ರದೇಶಗಳೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ

ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ಹೆಸರಿಸಲಾಗಿದೆ ಎಂದು ಗಿರಿನಾಥ್ ಅವರು ಚುನಾವಣಾ ಸಿದ್ಧತೆ ಕುರಿತು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಪಕ್ಷದ ಚಿಹ್ನೆವುಳ್ಳ 3 ಕೋಟಿ ರೂ. ಮೌಲ್ಯದ ಕುಕ್ಕರ್ ಸೇರಿ ಇತರೆ ವಸ್ತುಗಳು ಜಪ್ತಿ: ತುಷಾರ್‌ ಗಿರಿನಾಥ್‌

ಬೆಂಗಳೂರು ಮತದಾರರ ವಿವರ

  • ಒಟ್ಟು ಮತದಾರರು – 9,51,3,880
  • ಪುರುಷ ಮತದಾರರು – 4,92,6,270
  • ಮಹಿಳಾ ಮತದಾರರು – 4,58,5,824
  • 18ರಿಂದ 19 ವರ್ಷ ವಯಸ್ಸಿನ ಮತದಾರರು –
  • 80 ವರ್ಷ ಮೇಲ್ಪಟ್ಟ ಮತದಾರರು – 2,36,719

ಬೆಂಗಳೂರಿನಾದ್ಯಂತ 8,615 ಮತಗಟ್ಟೆಗಳು ಇದ್ದು ಈ ಪೈಕಿ 2,217 ಸೂಕ್ಷ್ಮ ಮತಗಟ್ಟೆಗಳಾಗಿವೆ ಎಂದು ಗಿರಿನಾಥ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!