AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮತಕ್ಕಾಗಿ ಉಡುಗೊರೆ ತಡೆಯಲು ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ರಾಜಕಾರಣಿಗಳು ಮತದಾರರಿಗೆ ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದನ್ನು ತಡೆಯುವುದಕ್ಕಾಗಿ ಮತ್ತು ಪರಿಶೀಲಿಸಲು ಸಹಾಯಕ ವೆಚ್ಚ ವೀಕ್ಷಕರ ನೇಮಕ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Bengaluru: ಮತಕ್ಕಾಗಿ ಉಡುಗೊರೆ ತಡೆಯಲು ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ
ತುಷಾರ್ ಗಿರಿನಾಥ್
Ganapathi Sharma
|

Updated on: Mar 29, 2023 | 8:50 PM

Share

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ದಿನಾಂಕಗಳನ್ನು ಬುಧವಾರ ಪ್ರಕಟಿಸಿದೆ. ಇದಾದ ಕೆಲವೇ ಗಂಟೆಗಳ ನಂತರ ಹೇಳಿಕೆ ನೀಡಿರುವ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ (ಬಿಬಿಎಂಪಿ ಆಯುಕ್ತ) ತುಷಾರ್ ಗಿರಿನಾಥ್, ಮೇ 10 ರಂದು ನಿಗದಿಯಾಗಿರುವ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜಕಾರಣಿಗಳು ಮತದಾರರಿಗೆ ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದನ್ನು ತಡೆಯುವುದಕ್ಕಾಗಿ ಮತ್ತು ಪರಿಶೀಲಿಸಲು ಸಹಾಯಕ ವೆಚ್ಚ ವೀಕ್ಷಕರ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಖರ್ಚುಗಳನ್ನು ಮೇಲ್ವಿಚಾರಣೆ ಮಾಡಲು ವಿವಿಧ ಕ್ಷೇತ್ರಗಳಲ್ಲಿ ಹಲವಾರು ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೂತ್‌ಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆ ಎಂದು ವಿಂಗಡಿಸಿದ್ದೇವೆ. ಬ್ಯಾಟರಾಯನಪುರದಲ್ಲಿ 3 ಕೋಟಿ ರೂ. ಮೌಲ್ಯದ ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ವೆಚ್ಚ ಸೂಕ್ಷ್ಮ (ಮತಕ್ಕಾಗಿ ಮತದಾರರಿಗೆ ಹೆಚ್ಚು ಆಮಿಷ ನೀಡುವುದಕ್ಕೆ ಸಂಬಂಧಿಸಿ) ಪ್ರದೇಶಗಳೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ

ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ಹೆಸರಿಸಲಾಗಿದೆ ಎಂದು ಗಿರಿನಾಥ್ ಅವರು ಚುನಾವಣಾ ಸಿದ್ಧತೆ ಕುರಿತು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಪಕ್ಷದ ಚಿಹ್ನೆವುಳ್ಳ 3 ಕೋಟಿ ರೂ. ಮೌಲ್ಯದ ಕುಕ್ಕರ್ ಸೇರಿ ಇತರೆ ವಸ್ತುಗಳು ಜಪ್ತಿ: ತುಷಾರ್‌ ಗಿರಿನಾಥ್‌

ಬೆಂಗಳೂರು ಮತದಾರರ ವಿವರ

  • ಒಟ್ಟು ಮತದಾರರು – 9,51,3,880
  • ಪುರುಷ ಮತದಾರರು – 4,92,6,270
  • ಮಹಿಳಾ ಮತದಾರರು – 4,58,5,824
  • 18ರಿಂದ 19 ವರ್ಷ ವಯಸ್ಸಿನ ಮತದಾರರು –
  • 80 ವರ್ಷ ಮೇಲ್ಪಟ್ಟ ಮತದಾರರು – 2,36,719

ಬೆಂಗಳೂರಿನಾದ್ಯಂತ 8,615 ಮತಗಟ್ಟೆಗಳು ಇದ್ದು ಈ ಪೈಕಿ 2,217 ಸೂಕ್ಷ್ಮ ಮತಗಟ್ಟೆಗಳಾಗಿವೆ ಎಂದು ಗಿರಿನಾಥ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು