ಬೆಂಗಳೂರು: ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ; ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್
ಇತ್ತೀಚೆಗೆ ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ಮೇಲೆ ದಾಳಿ ಮಾಡಿ ಕೋಟ್ಯಂತರ ರೂ ನಗದು, ಆಸ್ತಿ ಜಪ್ತಿ ಮಾಡಿದ್ದ ಇ.ಡಿ ತಂಡ ಇದೀಗ ನಿರ್ದೇಶಕನನ್ನು ಬಂಧಿಸಿದೆ. ಸದ್ಯ ನಿರ್ದೇಶಕನನ್ನು 10 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು, ಜೂನ್ 04: ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೇಬಲ್ಸ್(ಇಂಡಿಯಾ) ಲಿಮಿಟೆಡ್ (Deepak Cables (India) Limited) ನಿರ್ದೇಶಕ ಕರುಟೂರಿ ವೆಂಕಟೇಶ್ವರ್ ರಾವ್ರನ್ನು ಬೆಂಗಳೂರು ವಲಯದ ಇಡಿ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಇಡಿ ಅಧಿಕಾರಿಗಳು ದೀಪಕ್ ಕೇಬಲ್ಸ್ ಮೇಲೆ ದಾಳಿ ಮಾಡಿ ಕೋಟ್ಯಂತರ ನಗದು, ಆಸ್ತಿ ಜಪ್ತಿ ಮಾಡಿದ್ದರು.
ಮುಖ್ಯಾಂಶಗಳು
- SBI ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ
- ಇಡಿ ಅಧಿಕಾರಿಗಳಿಂದ ಕರುಟೂರಿ ವೆಂಕಟೇಶ್ವರ್ ರಾವ್ ಬಂಧನ
- 10 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್
ಇದನ್ನೂ ಓದಿ: ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್
ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ ಆರೋಪ ಬೆನ್ನಲ್ಲೇ ಮೇ 19 ಮತ್ತು 29ರಂದು ದೀಪಕ್ ಕೇಬಲ್ಸ್(ಇಂಡಿಯಾ) ಲಿಮಿಟೆಡ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಕೋಟ್ಯಂತರ ನಗದು ಸೇರಿದಂತೆ ಆಸ್ತಿ ಜಪ್ತಿ ಮಾಡಿದ್ದರು. ಅಷ್ಟೇ ಅಲ್ಲದೆ ಬೇರೆ ಬೇರೆ ಬ್ಯಾಂಕ್ ಖಾತೆಗಳಲ್ಲಿದ್ದ 18 ಕೋಟಿ ರೂ ಹಣವನ್ನು ಫ್ರೀಜ್ ಮಾಡಲಾಗಿತ್ತು. ಇದೀಗ ನಿರ್ದೇಶಕ ಕರುಟೂರಿ ವೆಂಕಟೇಶ್ವರ್ ರಾವ್ರನ್ನು ಬಂಧಿಸಲಾಗಿದೆ. ಸದ್ಯ 10 ದಿನ ಇ.ಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ
ಬರೋಬ್ಬರಿ 899 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ವಿರುದ್ಧ ಇಡಿ ತನಿಖೆ ಚುರುಕುಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಕ್ಕೂಟಗಳಿಂದ ಪಡೆದಿದ್ದ ಬೃಹತ್ ಮೊತ್ತದ ಸಾಲವನ್ನು ನಿಯಮಬಾಹಿರವಾಗಿ ಇತರೆಡೆಗೆ ವರ್ಗಾಯಿಸಿ, ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಇದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಆ ಬೆನ್ನಲ್ಲೇ ಇಡಿ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:43 pm, Thu, 4 June 26




