AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಮುಟ್ಟುಗೋಲು

ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.

ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಮುಟ್ಟುಗೋಲು
ಜಾರಿ ನಿರ್ದೇಶನಾಲಯ
TV9 Web
| Edited By: |

Updated on: Oct 21, 2021 | 11:11 PM

Share

ಬೆಂಗಳೂರು: ಬೆಂಗಳೂರು ಜಲ ಮಂಡಳಿ (BWSSB) ನಿವೃತ್ತ ಮುಖ್ಯ ಎಂಜಿನಿಯರ್​ ಎಸ್.ಎಂ.ಬಸವರಾಜ್ ಅವರಿಗೆ ಸೇರಿದ ₹ 7.48 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 2018ರಲ್ಲಿ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.

ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ₹ 7.48 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. 3.41 ಕೆಜಿ ಚಿನ್ನ, ವಜ್ರದ ಆಭರಣಗಳು, 2 ನಿವೇಶನಗಳು, ವಾಣಿಜ್ಯ ಸಂಕೀರ್ಣ ಹಾಗೂ ಬೆಂಗಳೂರು ಮತ್ತು ಮೈಸೂರಿನಲ್ಲಿ ಆರು ವಸತಿ ಗೃಹಗಳು ಇದರಲ್ಲಿ ಸೇರಿವೆ. ಎಸ್.ಎಂ.ಬಸವರಾಜ್ ಅವರು ತನ್ನ ಅತ್ತೆ ಮತ್ತು ಕುಟುಂಬದ ಇತರ ಕುಟುಂಬದ ಸದಸ್ಯರ ಹೆಸರಲ್ಲಿಯೂ ಸ್ಥಿರ ಮತ್ತು ಚರಾಸ್ತಿಗಳನ್ನು ಖರೀದಿ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಬೆಂಗಳೂರು, ಮೈಸೂರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.

ಎಸಿಬಿ ಬಲೆಗೆ ಕಂಪ್ಯೂಟರ್ ಆಪರೇಟರ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ನರೇಂದ್ರ ಕೆರೆ ಹೂಳೆತ್ತುವ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಓಂಕಾರಪ್ಪ ಎಂಬುವವರಿಂದ ನರೇಂದ್ರ ₹ 5 ಸಾವಿರ ಲಂಚ ಪಡೆಯುತ್ತಿದ್ದರು. ಎಸಿಬಿ ಎಸ್​ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಇದನ್ನೂ ಓದಿ: ಲಂಚ ಕೇಳಿದರೆ ಪೊಲೀಸರಿಗೆ ದೂರು ಕೊಡಿ: ಗೃಹ ಸಚಿವ ಆರಗ ಜ್ಞಾನೇಂದ್ರ ಇದನ್ನೂ ಓದಿ: ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು