AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆ್ಯಪ್​ಗಳ ಅಕ್ರಮ, 106 ಕೋಟಿ ಜಪ್ತಿ ಮಾಡಿದ ಇಡಿ

ಆ್ಯಪ್‌ನಲ್ಲಿ ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆ ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು.

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆ್ಯಪ್​ಗಳ ಅಕ್ರಮ, 106 ಕೋಟಿ ಜಪ್ತಿ ಮಾಡಿದ ಇಡಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Mar 30, 2023 | 9:11 AM

Share

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆಪ್ ಅಕ್ರಮ ವ್ಯವಹಾರ​ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿವಿಧ ಌಪ್​​ಗಳ ಬ್ಯಾಂಕ್​ ಖಾತೆಗಳಲ್ಲಿದ್ದ ₹106 ಕೋಟಿ ಜಪ್ತಿ ಮಾಡಿರುವುದಾಗಿ ಬುಧವಾರ ತಿಳಿಸಿದ್ದಾರೆ. ಚೀನಾದ ಪ್ರಜೆಗಳ ಪರವಾಗಿ ನಕಲಿ ನಿರ್ದೇಶಕ, ಚಂದಾದಾರರನ್ನ ನೇಮಿಸಿಕೊಂಡು ಅಕ್ರಮ ವ್ಯವಹಾರ ನಡೆಸಲಾಗುತ್ತಿದೆ. ಇದರಲ್ಲಿ ಕೆಲವು ಸಂಸ್ಥೆಗಳು ಸೇರಿಕೊಂಡಿವೆ ಎಂದು ಇಡಿ ಹೇಳಿದೆ.

ಆ್ಯಪ್‌ನಲ್ಲಿ ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆ ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಲೇವಾದೇವಿ ವ್ಯವಹಾರ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಅಧಿಕ ಬಡ್ಡಿ ನಿಷೇಧ ಕಾಯ್ದೆಯಡಿ ಎಫ್​​ಐಆರ್ ದಾಖಲಿಸಿದ್ದು ತನಿಖೆ ನಡೆಯುತ್ತಿದೆ. ಸಾಲದ ಆ್ಯಪ್ ಕಂಪನಿಗಳ ಮಾಲೀಕರಿಗೆ ಸೇರಿದ ಬ್ಯಾಂಕ್ ಖಾತೆಯಲ್ಲಿ 106 ಕೋಟಿ ರೂ ಹಣವಿದ್ದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru: ಚೀನಾ ಲೋನ್​ ಕಂಪನಿಗಳಿಂದ ವಂಚನೆ: 7 ಸಂಸ್ಥೆ, ಐವರ ವಿರುದ್ಧ ತನಿಖಾ ವರದಿ ಸಲ್ಲಿಸಿದ ಇಡಿ

ಕೊರೊನಾ ಲಾಕ್‌ಡೌನ್ ವೇಳೆ ಚೀನಾ ವ್ಯಕ್ತಿಗಳು ಸಾಲದ ಆ್ಯಪ್‌ಗಳನ್ನು ತೆರೆದು ಅದರ ಮೂಲಕ ಸಾಲ ಕೊಡಲು ಮುಂದಾಗಿದ್ದರು. ಇದಕ್ಕೆ ಸ್ಥಳೀಯರನ್ನು ಮಾಲೀಕರು, ನಿರ್ದೇಶಕರನ್ನಾಗಿ ಮಾಡಿ ಬ್ಯಾಂಕ್ ಖಾತೆಗಳನ್ನು ಅವರ ಹೆಸರಿನಲ್ಲಿ ತೆರೆದು ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಆದರೆ ವ್ಯವಹಾರದ ಸಂಪೂರ್ಣ ನಿಯಂತ್ರಣವನ್ನು ಚೀನಾದ ವ್ಯಕ್ತಿಗಳೇ ನಿರ್ವಹಿಸುತ್ತಿದ್ದರು. ಸಾರ್ವಜನಿಕರಿಗೆ ಆ್ಯಪ್‌ನಲ್ಲಿ ಸಾಲ ಕೊಟ್ಟು ನಿಗದಿಗಿಂತ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ಸಾಲ ಪಡೆದು ಗ್ರಾಹಕರು ಹಣ ಕೊಡದೇ ಇದ್ದರೆ ಗ್ರಾಹಕರ ಮೊಬೈಲ್‌ನಿಂದ ಕಳವು ಮಾಡಿದ್ದ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಸಾಲಗಾರರ ತೇಜೋವಧೆ ಮಾಡುತ್ತಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:11 am, Thu, 30 March 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!