AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆ್ಯಪ್​ಗಳ ಅಕ್ರಮ, 106 ಕೋಟಿ ಜಪ್ತಿ ಮಾಡಿದ ಇಡಿ

ಆ್ಯಪ್‌ನಲ್ಲಿ ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆ ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು.

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆ್ಯಪ್​ಗಳ ಅಕ್ರಮ, 106 ಕೋಟಿ ಜಪ್ತಿ ಮಾಡಿದ ಇಡಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 30, 2023 | 9:11 AM

Share

ಮುಖ್ಯಾಂಶಗಳು

  • ಚೀನಿ ಮೈಕ್ರೋ ಫೈನಾನ್ಸ್​ ಆಪ್ ಅಕ್ರಮ ವ್ಯವಹಾರ​, ಇಡಿಯಿಂದ ₹106 ಕೋಟಿ ಜಪ್ತಿ.
  • ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ.
  • ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು.

ಬೆಂಗಳೂರು: ಚೀನಿ ಮೈಕ್ರೋ ಫೈನಾನ್ಸ್​ ಆಪ್ ಅಕ್ರಮ ವ್ಯವಹಾರ​ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿವಿಧ ಌಪ್​​ಗಳ ಬ್ಯಾಂಕ್​ ಖಾತೆಗಳಲ್ಲಿದ್ದ ₹106 ಕೋಟಿ ಜಪ್ತಿ ಮಾಡಿರುವುದಾಗಿ ಬುಧವಾರ ತಿಳಿಸಿದ್ದಾರೆ. ಚೀನಾದ ಪ್ರಜೆಗಳ ಪರವಾಗಿ ನಕಲಿ ನಿರ್ದೇಶಕ, ಚಂದಾದಾರರನ್ನ ನೇಮಿಸಿಕೊಂಡು ಅಕ್ರಮ ವ್ಯವಹಾರ ನಡೆಸಲಾಗುತ್ತಿದೆ. ಇದರಲ್ಲಿ ಕೆಲವು ಸಂಸ್ಥೆಗಳು ಸೇರಿಕೊಂಡಿವೆ ಎಂದು ಇಡಿ ಹೇಳಿದೆ.

ಆ್ಯಪ್‌ನಲ್ಲಿ ಗ್ರಾಹಕರಿಗೆ ಸಾಲ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆ ಈ ಆ್ಯಪ್‌ಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಲೇವಾದೇವಿ ವ್ಯವಹಾರ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಅಧಿಕ ಬಡ್ಡಿ ನಿಷೇಧ ಕಾಯ್ದೆಯಡಿ ಎಫ್​​ಐಆರ್ ದಾಖಲಿಸಿದ್ದು ತನಿಖೆ ನಡೆಯುತ್ತಿದೆ. ಸಾಲದ ಆ್ಯಪ್ ಕಂಪನಿಗಳ ಮಾಲೀಕರಿಗೆ ಸೇರಿದ ಬ್ಯಾಂಕ್ ಖಾತೆಯಲ್ಲಿ 106 ಕೋಟಿ ರೂ ಹಣವಿದ್ದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru: ಚೀನಾ ಲೋನ್​ ಕಂಪನಿಗಳಿಂದ ವಂಚನೆ: 7 ಸಂಸ್ಥೆ, ಐವರ ವಿರುದ್ಧ ತನಿಖಾ ವರದಿ ಸಲ್ಲಿಸಿದ ಇಡಿ

ಕೊರೊನಾ ಲಾಕ್‌ಡೌನ್ ವೇಳೆ ಚೀನಾ ವ್ಯಕ್ತಿಗಳು ಸಾಲದ ಆ್ಯಪ್‌ಗಳನ್ನು ತೆರೆದು ಅದರ ಮೂಲಕ ಸಾಲ ಕೊಡಲು ಮುಂದಾಗಿದ್ದರು. ಇದಕ್ಕೆ ಸ್ಥಳೀಯರನ್ನು ಮಾಲೀಕರು, ನಿರ್ದೇಶಕರನ್ನಾಗಿ ಮಾಡಿ ಬ್ಯಾಂಕ್ ಖಾತೆಗಳನ್ನು ಅವರ ಹೆಸರಿನಲ್ಲಿ ತೆರೆದು ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಆದರೆ ವ್ಯವಹಾರದ ಸಂಪೂರ್ಣ ನಿಯಂತ್ರಣವನ್ನು ಚೀನಾದ ವ್ಯಕ್ತಿಗಳೇ ನಿರ್ವಹಿಸುತ್ತಿದ್ದರು. ಸಾರ್ವಜನಿಕರಿಗೆ ಆ್ಯಪ್‌ನಲ್ಲಿ ಸಾಲ ಕೊಟ್ಟು ನಿಗದಿಗಿಂತ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ಸಾಲ ಪಡೆದು ಗ್ರಾಹಕರು ಹಣ ಕೊಡದೇ ಇದ್ದರೆ ಗ್ರಾಹಕರ ಮೊಬೈಲ್‌ನಿಂದ ಕಳವು ಮಾಡಿದ್ದ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಸಾಲಗಾರರ ತೇಜೋವಧೆ ಮಾಡುತ್ತಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:11 am, Thu, 30 March 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ