AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಬಿ ಸಿಟಿಯ ಕಿಂಗ್ ಫಿಶರ್ ಟವರ್ ಸೇರಿ 11 ಕಡೆ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಸೇರಿದಂತೆ 11 ಸ್ಥಳಗಳಲ್ಲಿ ಇಡಿ ದಾಳಿ ನಡೆದಿದೆ.

ಯುಬಿ ಸಿಟಿಯ ಕಿಂಗ್ ಫಿಶರ್ ಟವರ್ ಸೇರಿ 11 ಕಡೆ  ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on:Jun 24, 2024 | 2:31 PM

Share

ಬೆಂಗಳೂರು, ಜೂನ್.24: ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ನಡೆಯುತ್ತಿದೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಾಳಿ ನಡೆಸಿದೆ.

ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಹಲವು ದೂರುಗಳು ದಾಖಲಾದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಡುಗೆ ಸಹಾಯಕಿ ಹುದ್ದೆಗೆ ₹50 ಸಾವಿರ ಲಂಚ!

ಅಡುಗೆ ಸಹಾಯಕಿ ಹುದ್ದೆಗೆ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಸದಸ್ಯೆ ವಿರುದ್ಧ ಆರೋಪ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡು ಪಟ್ಟಣ ಪಂಚಾಯಿತಿ ಸದಸ್ಯೆ ಬಿ.ಬಿ.ಜಾನ್ ಮಲ್ಲನ್ನವರ್, ಮಾರಿಕಾಂಬನಗರದ ಸರ್ಕಾರಿ ಶಾಲೆ ಅಡುಗೆ ಸಹಾಯಕಿ ನೇಮಕಾತಿಗಾಗಿ ಲಂಚಕ್ಕೆ ಕೇಳಿದ್ದಾರೆ ಎನ್ನಲಾಗ್ತಿರೋ ಫೋನ್ ಸಂಭಾಷಣೆ ಆಡಿಯೋ ವೈರಲ್ ಆಗ್ತಿದೆ.

ಇದನ್ನೂ ಓದಿ: ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!

ಪ್ರವಾಸಿಗರ ಹಲ್ಲೆ ಮಾಡಿದ ಇಬ್ಬರು ದುಷ್ಕರ್ಮಿಗಳು

ಕೊಡಗು ಜಿಲ್ಲೆಯ ಮಾದಾಪುರ ಬಳಿಯ ಕೋಟೆಬೆಟ್ಟ ರಸ್ತೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದಾರೆ. ಪುತ್ತೂರಿನಿಂದ ಮಾದಾಪುರಕ್ಕೆ ಪ್ರವಾಸಿಗರು ಬಂದಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವಾಸಿಗರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾರೆ. ಹಲ್ಲೆ ಮಾಡಿ ಸ್ಥಳದಲ್ಲೇ ಬೈಕ್ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಪ್ರವಾಸಿಗರು ಮಾದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:05 pm, Mon, 24 June 24

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ