ED Raids In Bengaluru: ಐಟಿ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಇಡಿ ದಾಳಿ, ಉದ್ಯಮಿಯೊಬ್ಬರ ಮನೆ ಪರಿಶೀಲನೆ

ED Raids In Bengaluru: ಮೊನ್ನೇ ಮೊನ್ನೇ ಅಷ್ಟೇ ಐಟಿ ಅಧಿಕಾರಿಗಳು ಬೆಂಗಳೂರಿನ ಹಲವೆಡೆ ದಾಳಿ ಮಾಡಿದ್ದು, ಕೋಟ್ಯಂತರ ನಗದು ಹಣ ವಶಪಡಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಇದೀಗ ಇಡಿ ದಾಳಿಯಾಗಿದೆ. ಬೆಂಗಳೂರಿನ ಉದ್ಯಮಿಯೊಬ್ಬರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ED Raids In Bengaluru: ಐಟಿ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಇಡಿ ದಾಳಿ, ಉದ್ಯಮಿಯೊಬ್ಬರ ಮನೆ ಪರಿಶೀಲನೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 17, 2023 | 11:25 AM

ಬೆಂಗಳೂರು, (ಅಕ್ಟೋಬರ್ 17): ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ(Bengaluru)  ಐಟಿ ದಾಳಿ ನಡೆದಿದೆ. ಮೊನ್ನೇ ಅಷ್ಟೇ ದಾಳಿ ಮಾಡಿದ್ದ ಐಟಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ನಗದು ಹಣ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಇಡಿ ದಾಳಿಯಾಗಿದೆ(ED Raids ). ಬೆಂಗಳೂರಿನ ಉದ್ಯಮಿಯೋರ್ವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿಯ ಕಸವಿನಹಳ್ಳಿ ಬಳಿ ಇರುವ ನಿವಾಸದ ಮೇಲೆ ದಾಳಿಯಾಗಿದೆ.

ಉದ್ಯಮಿ ಉಷಾ ರಾಮನಾನಿ ಮನೆ ಹಾಗೂ ಕಂಪನಿಗಳ ಕಚೇರಿಗಳ ಮೇಲೆ ದಾಳಿಯಾಗಿದೆ. ಇವರು ಹಲವು ಖಾಸಗಿ ಕಂಪನಿಗಳನ್ನು ಹೊಂದಿರುವ ಬ್ಗಗೆ ಮಾಹಿತಿ ತಿಳಿದುಬಂದಿದೆ. ಒಟ್ಟು 8 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್ 17) ಬೆಳಗ್ಗೆ 5 ಗಂಟೆಗೆ ಏಕಕಾಲದಲ್ಲಿ ದಾಳಿ‌ ನಡೆಸಿದ್ದಾರೆ.

ಇದನ್ನೂ ಓದಿ: 5 ದಿನ ನಡೆದ ಐಟಿ ದಾಳಿ: ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಸಿಕ್ಕಿರುವ ಹಣವೆಷ್ಟು ಗೊತ್ತಾ? 

ಇಡಿ ದಾಳಿಗೆ ಕಾರಣವೇನು?

ಆಪ್ಟ್ ಸರ್ಕ್ಯೂಟ್ ಇಂಡಿಯಾ ಪ್ರೈವೇಟ್. ಲಿಮಿಟೆಡ್ ಕಂಪನಿ ಎಂಡಿ ಆಗಿರುವ ಉಷಾ ರಾಮನಾನಿ ಅವರು ಕಂಪನಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲೋನ್ ಪಡೆದು ವಂಚನೆ ಮಾಡಿದ್ದಾರೆ. ಎಸ್ ಬಿಐ ಬ್ಯಾಂಕ್ ನಿಂದ 354 ಕೋಟಿ ರೂ. ಲೋನ್ ಪಡೆದು ವಂಚಿಸಿದ್ದಾರೆ. ಈ ವಂಚನೆ ಪ್ರಕರಣ ಇಡಿಗೆ ವರ್ಗಾವಣೆಯಾಗಿತ್ತು.

ಪ್ರಕರಣ ಹಿನ್ನಲೆ ಏನು..?

2011-16 ರ ವರೆಗೂ ಎಸ್​ಬಿಐ ಬ್ಯಾಂಕ್​ನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಒಟ್ಟು 354 ಕೋಟಿ ರೂಪಾಯಿ ಲೋನ್ ಪಡೆದುಕೊಂಡಿದ್ದರು. ಆದ್ರೆ, ಪಡೆದುಕೊಂಡಿದ್ದ ಲೋನ್ ಕಟ್ಟದೇ ವಂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆಪ್ಟ್ ಸರ್ಕ್ಯೂಟ್ ಇಂಡಿಯಾ ಪ್ರೈ.ಲಿ. ಓಸಿಐಲ್ (ಮೆಡಿಕಲ್ ಟೆಕ್ನಾಲಜಿ) ಕಂಪನಿ ವಿರುದ್ಧ 2019ರಲ್ಲಿ ಸಿಬಿಐಗೆ ದೂರು ನೀಡಿತ್ತು. ಬಳಿಕ ಈ ಪ್ರಕರಣವನ್ನು ಸಿಬಿಐ, ಇಡಿಗೆ ವರ್ಗಾವಣೆ ಮಾಡಿತ್ತು. ಸದ್ಯ ಇದೇ ಪ್ರಕರಣ ಸಂಬಂಧ ಉಷಾ ರಾಮನಾನಿ ಮನೆ, ಕಂಪನಿ ಹಾಗೂ ಕಚೇರಿ ಮೇಲೆ ಇಡಿ ದಾಳಿ ಮಾಡಿದ್ದು, PMLA ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದೆ.

ಐಟಿ ದಾಳಿ ವೇಳೆ 80 ಕೋಟಿ ರೂ. ಪತ್ತೆ

ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ನಗರದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ವಿಷಯ ಅಂದರೆ ಅದು ಐಟಿ ರೇಡ್‌. ದಾಳಿ ವೇಳೆ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಪುತ್ರನ ಮನೆಯಲ್ಲಿ, ಮಂಚದ ಕೆಳಗೆ ಅಡಗಿಸಿಟ್ಟಿದ್ದ 40 ಕೋಟಿಗೂ ಹೆಚ್ಚು ಹಣವನ್ನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ರು.. ಇದಾದ ಒಂದು ದಿನದ ಬೆನ್ನಲ್ಲೇ ಬಿಲ್ಡರ್ ಸಂತೋಷ್‌ಗೆ ಸೇರಿದ ಅಪಾರ್ಟ್ಮೆಂಟ್‌ನ ಫ್ಲ್ಯಾಟ್​ನಲ್ಲಿ 40 ಕೋಟಿಗೂ ಅಧಿಕ ಹಣವನ್ನು ಜಪ್ತಿಮಾಡಲಾಗಿತ್ತು.

ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮತ್ತು ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಒಟ್ಟಾರೆ 80 ಕೋಟಿ ಹಣ ಯಾರಿಗೆ ಸೇರಿದ್ದು ಅನ್ನೋ ಪ್ರಶ್ನೆ ಎದುರಾಗಿದೆ. ಹಣ ಸೇರಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿರುವ ಆದಾಯ ತೆರಿಗೆ ಇಲಾಖೆ ಈಗಾಗ್ಲೇ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಬಿಲ್ಡರ್ ಸಂತೋಷ್‌ಗೆ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇಂದು ಇಬ್ಬರನ್ನು ವಿಚಾರಣೆಗೊಳಪಡಿಸಲಿದೆ.

Published On - 10:47 am, Tue, 17 October 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ