AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್ ನಿವಾಸದ ಮುಂದೆ ಬೆಂಬಲಿಗರಿಂದ ಹೈಡ್ರಾಮ! ಎಸಿಬಿ ದಾಳಿಗೆ ನಿಖರ ಕಾರಣ ಇಲ್ಲಿದೆ

ಶಾಸಕ ಜಮೀರ್ ಮನೆ, ಕಚೇರಿ ಸೇರಿ 5 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ ಎಂದು ತಿಳಿದುಬಂದಿದ್ದು, ಸತತ 3 ಗಂಟೆಯಿಂದ ಎಸಿಬಿ ಅಧಿಕಾರಿಗಳು ತಲಾಶ್ ನಡೆಸುತ್ತಿದ್ದಾರೆ.

ಶಾಸಕ ಜಮೀರ್ ಅಹ್ಮದ್ ನಿವಾಸದ ಮುಂದೆ ಬೆಂಬಲಿಗರಿಂದ ಹೈಡ್ರಾಮ! ಎಸಿಬಿ ದಾಳಿಗೆ ನಿಖರ ಕಾರಣ ಇಲ್ಲಿದೆ
ಜಮೀರ್ ಅಹ್ಮದ್ ನಿವಾಸ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು
TV9 Web
| Edited By: sandhya thejappa|

Updated on: Jul 05, 2022 | 9:51 AM

Share

ಬೆಂಗಳೂರು: ಇಂದು (ಜುಲೈ 5) ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು (ACB Officials) ದಾಳಿ ನಡೆಸಿದ್ದಾರೆ. ದಾಳಿಯನ್ನು ಖಂಡಿಸಿ ಜಮೀರ್ ಬೆಂಬಲಿಗರು ನಿವಾಸದ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಹಿನ್ನೆಲೆ ಪೊಲೀಸರು ಪ್ರತಿಭಟನಾಕಾರರನ್ನು ವಾಪಸ್ ಕಳುಹಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ ಜಮೀರ್ ಅಹ್ಮದ್ ಮನೆಯಲ್ಲೇ ಇದ್ದರು. ಬೆಳಿಗ್ಗೆ 3.30ರಿಂದ ರೇಡ್ ನಡೆಸಲಾಗುತ್ತಿದೆ. ಎಸಿಬಿ ರೇಡ್ ಮಾಡಿದಾಗ ಶಾಸಕ ಜಮೀರ್ ಇನ್ನು ಎದ್ದಿರಲಿಲ್ಲ.

ಇನ್ನು ಶಾಸಕ ಜಮೀರ್ ಮನೆ, ಕಚೇರಿ ಸೇರಿ 5 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ ಎಂದು ತಿಳಿದುಬಂದಿದ್ದು, ಸತತ 3 ಗಂಟೆಯಿಂದ ಎಸಿಬಿ ಅಧಿಕಾರಿಗಳು ತಲಾಶ್ ನಡೆಸುತ್ತಿದ್ದಾರೆ.

ಬಿಟ್ಟು ಬಿಡದೆ ಜಮೀರ್​ಗೆ ಕಾಡ್ತಿರುವ ಐಎಂಎ ಉರುಳು: ಇಡಿ ವರದಿಯ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡುತ್ತಿದ್ದಾರೆ. ಐಎಂಎ ಕೇಸ್ ಸಂಬಂಧ ಇಡಿ ಎಸಿಬಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆ ದಾಳಿ ಮಾಡಿ ಮಾಡಿದ್ದಾರೆ. ಕಂಟೋನ್ಮೆಂಟ್ನಲ್ಲಿರುವ ಜಮೀರ್ ಅಹ್ಮದ್ ಖಾನ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ಮೇಲೆ ರೇಡ್ ಮಾಡಲಾಗಿದೆ. ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್ ಮೇಲೂ ಎಸಿಬಿ ದಾಳಿ ನಡೆದಿದ್ದು, ಬನಶಂಕರಿಯಲ್ಲಿರುವ ಜಿ.ಕೆ.ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ಇದನ್ನೂ ಓದಿ
Image
Jasprit Bumrah: ಕಪಿಲ್ ದೇವ್ ಹೆಸರಲ್ಲಿದ್ದ ಮತ್ತೊಂದು ದಾಖಲೆ ಪುಡಿ ಪುಡಿ ಮಾಡಿದ ಜಸ್​ಪ್ರೀತ್ ಬುಮ್ರಾ
Image
Petrol Price Today: ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆಗೆ ಏಕನಾಥ ಶಿಂದೆ ಕ್ರಮ; ಬೆಂಗಳೂರು ಸೇರಿದಂತೆ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
Image
Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
Image
ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಇದನ್ನೂ ಓದಿ: Priyanka Upendra: ಡಾಕ್ಟರ್​ ಪ್ರಿಯಾಂಕಾ ಉಪೇಂದ್ರ: ಡಾಕ್ಟರೇಟ್​ ಸಿಕ್ಕ ಖುಷಿಯಲ್ಲಿ ಮಾತನಾಡಿದ ನಟಿ

ನಿಖರ ಕಾರಣ ಏನು?: ಎಸಿಬಿ ಅಧಿಕಾರಿಗಳು ಜಮೀರ್ ನಿವಾಸದ ಮೇಲೆ ದಾಳಿ ಮಾಡಲು ನಿಖರ ಕಾರಣ ಟಿವಿ9ಗೆ ಲಭ್ಯವಾಗಿದೆ. ಪ್ರತಿಯೊಂದು ತನಿಖಾ ಸಂಸ್ಥೆಗಳಿಗೆ ಕೆಲಸ ಬೇರೆ ಬೇರೆಯಾಗಿರುತ್ತದೆ. ಇಡಿ ಆ್ಯಕ್ಟ್ ಬೇರೆಯದ್ದೇ ಇರಲಿದೆ, ಎಸಿಬಿ ಆ್ಯಕ್ಟ್ ಬೇರೆಯದ್ದೇ ಇರಲಿದೆ. ಜಮೀರ್ ಅಹಮ್ಮದ್ ಸಾರ್ವಜನಿಕ ಪ್ರತಿನಿಧಿ. ಸಾರ್ವಜನಿಕ ಪ್ರತಿನಿಧಿ ಆಗಿರುವಾಗ ಎಸಿಬಿ ಕೂಡ ದಾಳಿ ಮಾಡಬಹುದು. ಖಾಸಗಿ ವ್ಯಕ್ತಿ ಆಗಿದ್ದರೆ ಎಸಿಬಿ ದಾಳಿ ಮಾಡುವಂತೆ ಇಲ್ಲ. ಇಡಿ ಐಎಂಎ ಕೇಸ್ ತನಿಖೆ ನಡೆಸಿತ್ತು. ತನಿಖೆಯಿಂದ ಅಕ್ರಮ ಆಸ್ತಿ ಗಳಿಸಿರುವ ಬಗ್ಗೆ ಎಸಿಬಿಗೆ ವರದಿ ನೀಡಿತ್ತು.

ಇದನ್ನೂ ಓದಿ: ಗುಟ್ಕಾ ಜಾಹೀರಾತಿನಲ್ಲಿ ಅಕ್ಷಯ್​, ಅಜಯ್​, ಶಾರುಖ್​ ನಟಿಸಿದ್ದು ತಪ್ಪಲ್ಲ ಎಂದ ಮತ್ತೊಬ್ಬ ನಟ

Follow Us
TV9 Web
TV9 Web

TV9 Kannada

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?