AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ; ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಇ.ಡಿ. ನೋಟಿಸ್

ED Notice to BBMP Commissioner; ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್​​ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಕೊಳವೆ ಬಾವಿ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ; ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಇ.ಡಿ. ನೋಟಿಸ್
ತುಷಾರ್ ಗಿರಿನಾಥ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 28, 2022 | 7:53 AM

Share

ಬೆಂಗಳೂರು: ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಬಿಬಿಎಂಪಿ (BBMP) ಮುಖ್ಯ ತುಷಾರ್ ಗಿರಿನಾಥ್​​ಗೆ (Tushar Giri Nath) ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 198 ವಾರ್ಡ್​ಗಳಲ್ಲಿ ಕೊಳವೆ ಬಾವಿ ಕೊರೆಸುವ ಮತ್ತು ಆರ್​​ಒ ಘಟಕಗಳ ಸ್ಥಾಪನೆ ಹೆಸರಿನಲ್ಲಿ 2016ರಿಂದ 2018ರ ವರೆಗೆ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ಎಸಗಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕ ಅಧ್ಯಕ್ಷ ಎನ್​.ಆರ್​.ರಮೇಶ್ ದೂರು ನೀಡಿದ್ದರು. ಅಕ್ರಮ ಹಣಕಾಸು ವರ್ಗಾವಣೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಒಟ್ಟು 969 ಕೋಟಿ ರೂ. ವೆಚ್ಚದಲ್ಲಿ 9,588 ಕೊಳವೆ ಬಾವಿ ಕೊರೆಸಲಾಗಿದೆ. 976 ಆರ್​ಒ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ರಮೇಶ್, 2019ರ ಮೇ ತಿಂಗಳಲ್ಲಿ ಭರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು. 2016ರಿಂದ 2018ವರೆಗೆ ಆಯುಕ್ತರಾಗಿದ್ದವರ ವಿರುದ್ಧ, 5 ಜನ ಜಂಟಿ ಆಯುಕ್ತರು, 5 ಮುಖ್ಯ ಅಭಿಯಂತರರು ಸೇರಿದಂತೆ 40 ಅಧಿಕ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿತ್ತು. ಎಸಿಬಿ ರದ್ದಾದ ಬಳಿಕ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸಲಾಗಿತ್ತು. ಬೃಹತ್ ಮೊತ್ತದ ಪ್ರಕರಣವಾದ್ದರಿಂದ ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆ ಅಡಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮತದಾರರ ಪಟ್ಟಿ ಅಕ್ರಮ: ಮನೆ ಮನೆಗೆ ತೆರಳಿ ವೋಟರ್​ ಐಡಿ ಪರಿಶೀಲಿಸಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ, ಆರ್​ಒ ಘಟಕಗಳು ಎಲ್ಲೆಲ್ಲಿವೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ಕಲೆ ಹಾಕುತ್ತಿದೆ.

ಬಿಬಿಎಂಪಿ ಅಧಿಕಾರಿಗಳಿಗೆ ಆತಂಕ

ಜಾರಿ ನಿರ್ದೇಶನಾಲಯ ನೋಟಿಸ್ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಆಂತರಿಕ ಸಭೆ ನಡೆಸಿದ್ದಾರೆ. 2016ರಿಂದ 18ರ ಅವಧಿಯಲ್ಲಿ ಎಲ್ಲೆಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ, ಎಲ್ಲೆಲ್ಲಿ ಆರ್​ಒ ಘಟಕಗಳನ್ನು ಸ್ಥಾಪಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ವಾರ್ಡ್ ಮಟ್ಟದ ಇಂಜಿನಿಯರ್​ಗಳಿಂದ ಮಾಹಿತಿ ಕಲೆ ಹಾಕಿದ್ದಾರೆ. ಆದರೆ, ಈ ವೇಳೆ 9,588 ಕೊಳವೆ ಬಾವಿಗಳು ಮತ್ತು ಆರ್​ಒ ಘಟಕಗಳ ಬಗ್ಗೆ ಸೂಕ್ತ ಲೆಕ್ಕ ಸಿಕ್ಕಿಲ್ಲ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ