AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ

ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ
ಮುಜಾಹಿದ್- ಜಮೀರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 05, 2021 | 9:08 PM

Share

ಬೆಂಗಳೂರು: ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಗುರುವಾರ ಇಡಿ ದಾಳಿ ನಡೆದಿದೆ. ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮುಜಾಹಿದ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಶಿವಾಜಿನಗರ ವಾರ್ಡ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದು, ಬಿಬಿಎಂಪಿ ಮುಂದಿನ ಚುನಾವಣೆಗೆ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದರು.

ಫ್ರೇಜರ್ಟೌನ್ ವಾರ್ಡ್ ಅಭ್ಯರ್ಥಿ ಎಂದು ಬಿಂಬಿತವಾಗಿದ್ದರು. ಮುಜಾಹಿದ್ ವಿರುದ್ಧ ಮನ್ಸೂರ್ ಖಾನ್ಗೆ ನೆರವು ಆರೋಪವಿದೆ. ಮನ್ಸೂರ್ ದೇಶ ಬಿಡುವಾಗ ಏರ್ಪೋರ್ಟ್ವರೆಗೆ ಮುಜಾಹಿದ್ ಪ್ರಯಾಣ ಮಾಡಿದ್ದರು. ಎಸ್ ಐಟಿ ಮುಜಾಹಿದ್ ನ್ನು  ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಶಾಸಕ ಜಮೀರ್ ಅಹ್ಮದ್ ಸಹೋದರನನ್ನು​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!