AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ

ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ
ಮುಜಾಹಿದ್- ಜಮೀರ್ (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 05, 2021 | 9:08 PM

Share

ಬೆಂಗಳೂರು: ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಗುರುವಾರ ಇಡಿ ದಾಳಿ ನಡೆದಿದೆ. ಜಮೀರ್ ಆಪ್ತವಲಯದಲ್ಲಿ ಪ್ರಮುಖನಾಗಿರುವ ಮುಜಾಹಿದ್ ಅವರ ಬೆಂಗಳೂರಿನ ಫ್ರೇಜರ್ ಟೌನ್ ಎಂ.ಎಂ.ಸ್ಟ್ರೀಟ್ ನಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮುಜಾಹಿದ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಶಿವಾಜಿನಗರ ವಾರ್ಡ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದು, ಬಿಬಿಎಂಪಿ ಮುಂದಿನ ಚುನಾವಣೆಗೆ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದರು.

ಫ್ರೇಜರ್ಟೌನ್ ವಾರ್ಡ್ ಅಭ್ಯರ್ಥಿ ಎಂದು ಬಿಂಬಿತವಾಗಿದ್ದರು. ಮುಜಾಹಿದ್ ವಿರುದ್ಧ ಮನ್ಸೂರ್ ಖಾನ್ಗೆ ನೆರವು ಆರೋಪವಿದೆ. ಮನ್ಸೂರ್ ದೇಶ ಬಿಡುವಾಗ ಏರ್ಪೋರ್ಟ್ವರೆಗೆ ಮುಜಾಹಿದ್ ಪ್ರಯಾಣ ಮಾಡಿದ್ದರು. ಎಸ್ ಐಟಿ ಮುಜಾಹಿದ್ ನ್ನು  ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಶಾಸಕ ಜಮೀರ್ ಅಹ್ಮದ್ ಸಹೋದರನನ್ನು​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ