ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ (Maharshi Valmiki Development Corporation)ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ವಿಲ್ಲಾ ಮತ್ತು ರಾಯಚೂರಿನ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದರು. ಇದೀಗ ಸತತ 37 ಗಂಟೆಗಳ ಶೋಧ ಕಾರ್ಯ ಮುಕ್ತಾಯಗೊಳಿಸಿದ್ದಾರೆ.

ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?
ಶಾಸಕ ದದ್ದಲ್ ನಿವಾಸದಲ್ಲಿ ಸತತ 38 ಗಂಟೆಗಳ ಕಾಲ ನಡೆದ ಇಡಿ ಕಾರ್ಯಾಚರಣೆ ಅಂತ್ಯ, ಸಿಕ್ಕಿದ್ದೇನು?
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2024 | 10:48 PM

ಬೆಂಗಳೂರು, ಜು.11: ವಾಲ್ಮೀಕಿ ಅಭಿವೃದ್ಧಿ ನಿಗಮ(Valmiki Development Corporation)ದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ವಿಲ್ಲಾ ಮತ್ತು ರಾಯಚೂರಿನ ನಿವಾಸದಲ್ಲಿ ಇಡಿ ಪರಿಶೀಲನೆ ಮುಕ್ತಾಯವಾಗಿದೆ. ಯಲಹಂಕ ಬಳಿಯ ಶ್ರೀನಿವಾಸಪುರದಲ್ಲಿರುವ ದದ್ದಲ್​ಗೆ ಸೇರಿದ ವಿಲ್ಲಾದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬರೋಬ್ಬರಿ 37 ಗಂಟೆ ಶೋಧಕಾರ್ಯದ ಬಳಿಕ ಕಾರ್ಯಾಚರಣೆ ಮುಕ್ತಾಯಗೊಳಿಸಿದ್ದಾರೆ.

ಇಡಿ ಅಧಿಕಾರಿಗಳಿಂದ ನಿರಂತರ ದಾಖಲೆ ಪರಿಶೀಲನೆ

ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಅವರನ್ನು ಕೂಡ ಇಡಿ ವಿಚಾರಣೆ ಒಳಪಡಿಸಿತ್ತು. ಇನ್ನು ಕಳೆದ ಎರಡು ದಿನಗಳಿಂದ ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು, ದದ್ದಲ್ ವಿಲ್ಲಾದಲ್ಲಿ ಸಿಕ್ಕ ದಾಖಲೆಗಳನ್ನು ಇನೋವಾ ಕಾರಿನಲ್ಲಿ ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕೊಂಡೊಯ್ದಿದ್ದಾರೆ. ಇತ್ತ ಇಡಿ ದಾಳಿ ಅಂತ್ಯವಾದರೂ ಕೂಡ ಶಾಸಕ ಬಸವನಗೌಡ ದದ್ದಾಲ್ ‌ಹೊರಗಡೆ ಬಾರದೆ, ಯಾವುದೇ ಪ್ರತಿಕ್ರಿಯೆ ನೀಡದೆ ಮನೆಯ ಡೋರ್ ಲಾಕ್ ಮಾಡಿಕೊಂಡು ಒಳಗಡೆ ಇದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು

ಇತ್ತ ನಿನ್ನೆ ಬೆಳಗ್ಗೆ 7 ಗಂಟೆಯಿಂದ ರಾಯಚೂರಲ್ಲಿ ಪರಿಶೀಲನೆ ನಡೆಸುತ್ತಿದ್ದ ಇಡಿ ಅಧಿಕಾರಿಗಳ ದಾಳಿ ಕೂಡ ಮುಕ್ತಾಯವಾಗಿದೆ. ದದ್ದಲ್ ಮಾಜಿ ಪಿಎ ಪಂಪಣ್ಣ, ದದ್ದಲ್ ಅಳಿಯ ಚನ್ನಬಸವ ವಿಚಾರಣೆ ನಡೆಸಲಾಗಿತ್ತು. ಇದೀಗ ಯಾರನ್ನೂ ವಶಕ್ಕೆ ಪಡೆಯದೆ, ಬಸನಗೌಡ ದದ್ದಲ್ ಹಾಗೂ ಪಿಎ ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ವಶಕ್ಕೆ ಪಡೆದು, ಬ್ಯಾಗ್​ಗಳಲ್ಲಿ ತುಂಬಿಸಿ ಕೊಂಡೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!