AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ

ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ
ಜಾರಿ ನಿರ್ದೇಶನಾಲಯ
TV9 Web
| Edited By: ಆಯೇಷಾ ಬಾನು|

Updated on:Oct 22, 2022 | 10:57 AM

Share

ಬೆಂಗಳೂರು: ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಅಧಿಕಾರಿಗಳು(ಜಾರಿ ನಿರ್ದೇಶನಾಲಯ) ನಗರದ 5 ಕಡೆ ದಾಳಿ ಮಾಡಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ 18 FIR ದಾಖಲಾಗಿದ್ದವು. ಕೇಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಎಲ್ಲಾ ಲೋನ್ ಆ್ಯಪ್ ಗಳ ಮೂಲ ಚೀನಾವೆಂದು ಪತ್ತೆಯಾಗಿತ್ತು. ಭಾರತೀಯ ಮೂಲದ ಉದ್ಯೋಗಿಗಳನ್ನೇ ಕಂಪನಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಚೀನಿ ಲೋನ್ ಆ್ಯಪ್​ಗಳ ಮೇಲೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 100 ಕೋಟಿ ಮುಟ್ಟುಗೋಲು

ಮತ್ತೊಂದು ಚೀನಿ ಕಂಪನಿಯ ಮೇಲೆ ಇಡಿ ದಾಳಿ

ಕೆಲ ತಿಂಗಳ ಹಿಂದೆ ಉದ್ಯೋಗದ ಭರವಸೆ ಕೊಟ್ಟು ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ‘ಕೀಪ್​ಶೇರ್’ ಆ್ಯಪ್​ಗೆ ಸೇರಿದ 12 ಕೇಂದ್ರಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ₹ 5.88 ಕೋಟಿ ನಗದು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಆ್ಯಪ್​ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಾರ್ಟ್​ಟೈಮ್ ಕೆಲಸ ಕೊಡುವುದಾಗಿ ಯುವಕರನ್ನು ಆಕರ್ಷಿಸುತ್ತಿದ್ದ ‘ಕೀಪ್​ಶೇರ್’ ಆ್ಯಪ್, ಸಾಕಷ್ಟು ಜನರನ್ನು ವಂಚಿಸಿತ್ತು. ಚೀನಾ ಮೂಲದ ವ್ಯಕ್ತಿಗಳು ಭಾರತೀಯರನ್ನೇ ನಿರ್ದೇಶಕರನ್ನಾಗಿಸಿ ಭಾರತದ ವಿವಿಧೆಡೆ ಒಂದಿಷ್ಟು ಕಚೇರಿಗಳನ್ನು ತೆರೆದಿದ್ದರು. ಈ ಕಚೇರಿಗಳ ಟೆಲಿಕಾಲರ್​ಗಳು ಯುವಕರಿಗೆ ಗಾಳ ಹಾಕಿ ಅವರ ಮಾಹಿತಿ ಸಂಗ್ರಹಿಸಿ, ಉದ್ಯೋಗಕ್ಕಾಗಿ ಹಣದ ಬೇಡಿಕೆ ಇಡುತ್ತಿದ್ದರು. ಸಾಕಷ್ಟು ಮೊತ್ತ ಸಂಗ್ರಹವಾಗುತ್ತಿದ್ದಂತೆ ಕಂಪನಿಯೇ ನಾಪತ್ತೆಯಾಗುತ್ತಿತ್ತು. ಇದರ ಜೊತೆಗೆ ಹೂಡಿಕೆ ಆ್ಯಪ್​ಗಳ ಹೆಸರಿನಲ್ಲಿಯೂ ಸಾರ್ವಜನಿಕರಿಂದ ದಾಖಲೆಗಳು ಹಾಗೂ ಹಣ ಸಂಗ್ರಹಿಸಿರುವ ಬಗ್ಗೆಯೂ ತನಿಖೆ ವೇಳೆ ತಿಳಿದುಬಂದಿತ್ತು.

Published On - 10:50 am, Sat, 22 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ