AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ

ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ
ಜಾರಿ ನಿರ್ದೇಶನಾಲಯ
Follow us
TV9 Web
| Updated By: ಆಯೇಷಾ ಬಾನು

Updated on:Oct 22, 2022 | 10:57 AM

ಬೆಂಗಳೂರು: ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಅಧಿಕಾರಿಗಳು(ಜಾರಿ ನಿರ್ದೇಶನಾಲಯ) ನಗರದ 5 ಕಡೆ ದಾಳಿ ಮಾಡಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ 18 FIR ದಾಖಲಾಗಿದ್ದವು. ಕೇಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಎಲ್ಲಾ ಲೋನ್ ಆ್ಯಪ್ ಗಳ ಮೂಲ ಚೀನಾವೆಂದು ಪತ್ತೆಯಾಗಿತ್ತು. ಭಾರತೀಯ ಮೂಲದ ಉದ್ಯೋಗಿಗಳನ್ನೇ ಕಂಪನಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಚೀನಿ ಲೋನ್ ಆ್ಯಪ್​ಗಳ ಮೇಲೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 100 ಕೋಟಿ ಮುಟ್ಟುಗೋಲು

ಮತ್ತೊಂದು ಚೀನಿ ಕಂಪನಿಯ ಮೇಲೆ ಇಡಿ ದಾಳಿ

ಕೆಲ ತಿಂಗಳ ಹಿಂದೆ ಉದ್ಯೋಗದ ಭರವಸೆ ಕೊಟ್ಟು ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ‘ಕೀಪ್​ಶೇರ್’ ಆ್ಯಪ್​ಗೆ ಸೇರಿದ 12 ಕೇಂದ್ರಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ₹ 5.88 ಕೋಟಿ ನಗದು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಆ್ಯಪ್​ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಾರ್ಟ್​ಟೈಮ್ ಕೆಲಸ ಕೊಡುವುದಾಗಿ ಯುವಕರನ್ನು ಆಕರ್ಷಿಸುತ್ತಿದ್ದ ‘ಕೀಪ್​ಶೇರ್’ ಆ್ಯಪ್, ಸಾಕಷ್ಟು ಜನರನ್ನು ವಂಚಿಸಿತ್ತು. ಚೀನಾ ಮೂಲದ ವ್ಯಕ್ತಿಗಳು ಭಾರತೀಯರನ್ನೇ ನಿರ್ದೇಶಕರನ್ನಾಗಿಸಿ ಭಾರತದ ವಿವಿಧೆಡೆ ಒಂದಿಷ್ಟು ಕಚೇರಿಗಳನ್ನು ತೆರೆದಿದ್ದರು. ಈ ಕಚೇರಿಗಳ ಟೆಲಿಕಾಲರ್​ಗಳು ಯುವಕರಿಗೆ ಗಾಳ ಹಾಕಿ ಅವರ ಮಾಹಿತಿ ಸಂಗ್ರಹಿಸಿ, ಉದ್ಯೋಗಕ್ಕಾಗಿ ಹಣದ ಬೇಡಿಕೆ ಇಡುತ್ತಿದ್ದರು. ಸಾಕಷ್ಟು ಮೊತ್ತ ಸಂಗ್ರಹವಾಗುತ್ತಿದ್ದಂತೆ ಕಂಪನಿಯೇ ನಾಪತ್ತೆಯಾಗುತ್ತಿತ್ತು. ಇದರ ಜೊತೆಗೆ ಹೂಡಿಕೆ ಆ್ಯಪ್​ಗಳ ಹೆಸರಿನಲ್ಲಿಯೂ ಸಾರ್ವಜನಿಕರಿಂದ ದಾಖಲೆಗಳು ಹಾಗೂ ಹಣ ಸಂಗ್ರಹಿಸಿರುವ ಬಗ್ಗೆಯೂ ತನಿಖೆ ವೇಳೆ ತಿಳಿದುಬಂದಿತ್ತು.

Published On - 10:50 am, Sat, 22 October 22

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ