AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ

ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ: ನಗರದ ಐದು ಕಡೆ ದಾಳಿ, 78 ಕೋಟಿ ಹಣ ಜಪ್ತಿ
ಜಾರಿ ನಿರ್ದೇಶನಾಲಯ
TV9 Web
| Updated By: ಆಯೇಷಾ ಬಾನು|

Updated on:Oct 22, 2022 | 10:57 AM

Share

ಬೆಂಗಳೂರು: ಚೀನಾ ಮೂಲದ ಲೋನ್​ ಕಂಪನಿಗಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಅಧಿಕಾರಿಗಳು(ಜಾರಿ ನಿರ್ದೇಶನಾಲಯ) ನಗರದ 5 ಕಡೆ ದಾಳಿ ಮಾಡಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ 18 FIR ದಾಖಲಾಗಿದ್ದವು. ಕೇಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಎಲ್ಲಾ ಲೋನ್ ಆ್ಯಪ್ ಗಳ ಮೂಲ ಚೀನಾವೆಂದು ಪತ್ತೆಯಾಗಿತ್ತು. ಭಾರತೀಯ ಮೂಲದ ಉದ್ಯೋಗಿಗಳನ್ನೇ ಕಂಪನಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಕಡಿಮೆ ಸಾಲ ನೀಡಿ‌ ಅಧಿಕ ಬಡ್ಡಿ ವಸೂಲಿ ಮಾಡಿ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿತ್ತು. ವಸೂಲಿಯಾದ ಹಣವನ್ನ ಅಕ್ರಮವಾಗಿ ವಿದೇಶಿ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿ 78 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಚೀನಿ ಲೋನ್ ಆ್ಯಪ್​ಗಳ ಮೇಲೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 100 ಕೋಟಿ ಮುಟ್ಟುಗೋಲು

ಮತ್ತೊಂದು ಚೀನಿ ಕಂಪನಿಯ ಮೇಲೆ ಇಡಿ ದಾಳಿ

ಕೆಲ ತಿಂಗಳ ಹಿಂದೆ ಉದ್ಯೋಗದ ಭರವಸೆ ಕೊಟ್ಟು ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ‘ಕೀಪ್​ಶೇರ್’ ಆ್ಯಪ್​ಗೆ ಸೇರಿದ 12 ಕೇಂದ್ರಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ₹ 5.88 ಕೋಟಿ ನಗದು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಆ್ಯಪ್​ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಾರ್ಟ್​ಟೈಮ್ ಕೆಲಸ ಕೊಡುವುದಾಗಿ ಯುವಕರನ್ನು ಆಕರ್ಷಿಸುತ್ತಿದ್ದ ‘ಕೀಪ್​ಶೇರ್’ ಆ್ಯಪ್, ಸಾಕಷ್ಟು ಜನರನ್ನು ವಂಚಿಸಿತ್ತು. ಚೀನಾ ಮೂಲದ ವ್ಯಕ್ತಿಗಳು ಭಾರತೀಯರನ್ನೇ ನಿರ್ದೇಶಕರನ್ನಾಗಿಸಿ ಭಾರತದ ವಿವಿಧೆಡೆ ಒಂದಿಷ್ಟು ಕಚೇರಿಗಳನ್ನು ತೆರೆದಿದ್ದರು. ಈ ಕಚೇರಿಗಳ ಟೆಲಿಕಾಲರ್​ಗಳು ಯುವಕರಿಗೆ ಗಾಳ ಹಾಕಿ ಅವರ ಮಾಹಿತಿ ಸಂಗ್ರಹಿಸಿ, ಉದ್ಯೋಗಕ್ಕಾಗಿ ಹಣದ ಬೇಡಿಕೆ ಇಡುತ್ತಿದ್ದರು. ಸಾಕಷ್ಟು ಮೊತ್ತ ಸಂಗ್ರಹವಾಗುತ್ತಿದ್ದಂತೆ ಕಂಪನಿಯೇ ನಾಪತ್ತೆಯಾಗುತ್ತಿತ್ತು. ಇದರ ಜೊತೆಗೆ ಹೂಡಿಕೆ ಆ್ಯಪ್​ಗಳ ಹೆಸರಿನಲ್ಲಿಯೂ ಸಾರ್ವಜನಿಕರಿಂದ ದಾಖಲೆಗಳು ಹಾಗೂ ಹಣ ಸಂಗ್ರಹಿಸಿರುವ ಬಗ್ಗೆಯೂ ತನಿಖೆ ವೇಳೆ ತಿಳಿದುಬಂದಿತ್ತು.

Published On - 10:50 am, Sat, 22 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ