ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪೆನಿ‌ ಮೇಲೆ ಇಡಿ ದಾಳಿ

ಓಡಾ ಕ್ಲಾಸ್ ಹೆಸರಿನಲ್ಲಿ ಆನ್‌ಲೈನ್ ಶಿಕ್ಷಣವನ್ನು ಒದಗಿಸುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಎರಡು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪೆನಿ‌ ಮೇಲೆ ಇಡಿ ದಾಳಿ
ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈ ಲಿ. ಕಂಪನಿ ಮೇಲೆ ಇಡಿ ದಾಳಿ
Follow us
|

Updated on:Apr 27, 2023 | 5:43 PM

ಬೆಂಗಳೂರು: ಆನ್‌ಲೈನ್ ಶಿಕ್ಷಣ ಸಂಸ್ಥೆ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ. (Pigeon Education Technology India Pvt Ltd) ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (Enforcement Directorate -ED) ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ‘ಓಡಾ ಕ್ಲಾಸ್’ ಹೆಸರಿನಲ್ಲಿ ಆನ್‌ಲೈನ್ ಶಿಕ್ಷಣವನ್ನು ಒದಗಿಸುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಎರಡು ಸ್ಥಳಗಳನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಅಡಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿದೇಶಿ ವಿನಿಮಯ ಕಾನೂನು ಉಲ್ಲಂಘಿಸಿ ಚೀನಾಕ್ಕೆ ಕಾನೂನುಬಾಹಿರವಾಗಿ 82 ಕೋಟಿ ರೂ.ಗಳನ್ನು ರವಾನೆ ಮಾಡಿದ ಆರೋಪದ ಮೇಲೆ ಚೀನಾ ಪ್ರಜೆಗಳ ಸಂಪೂರ್ಣ ಮಾಲೀಕತ್ವ ಮತ್ತು ನಿಯಂತ್ರಣದಲ್ಲಿರುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪನಿ ಮೇಲೆ ದಾಳಿ ನಡೆಸಿ ಶೋಧ ನಡೆಸಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

“ಕಂಪನಿಯು 100 ಪ್ರತಿಶತ ಚೀನೀ ಪ್ರಜೆಗಳ ಒಡೆತನದಲ್ಲಿದೆ ಮತ್ತು ಕೇಮನ್ ದ್ವೀಪಗಳಲ್ಲಿ ನಿಯಂತ್ರಣ ಕಂಪನಿಯನ್ನು ಹೊಂದಿರುವ ಘಟಕಗಳ ಸಂಕೀರ್ಣ ವೆಬ್ ಅನ್ನು ಒಳಗೊಂಡಿರುವ ಗುಂಪಿನ ಭಾಗವಾಗಿದೆ” ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಂಪನಿಯ ಪ್ರಸ್ತುತ ನಿರ್ದೇಶಕರು, ಚೀನಾದ ಲಿಯು ಕ್ಯಾನ್ ಮತ್ತು ವೇದಾಂತ್ ಹಮಿರ್ವಾಸಿಯಾ.

ಇದನ್ನೂ ಓದಿ: Lokayukta Raid: BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನಾಭರಣ ಪತ್ತೆ!

“ಕಂಪನಿಯ ಸಂಪೂರ್ಣ ವ್ಯವಹಾರಗಳನ್ನು ಚೀನಾದಿಂದ ಲಿಯು ಕ್ಯಾನ್ ನಿಯಂತ್ರಿಸುತ್ತಾರೆ. ಆದರೆ ಭಾರತೀಯ ನಿರ್ದೇಶಕರು ಕಂಪನಿಯ ವ್ಯವಹಾರಗಳಿಗೆ ಯಾವುದೇ ನಿಯಂತ್ರಣ ಹೊಂದಿಲ್ಲ. ಆದದರೆ ಅವರು ಚೀನಾದ ನಿರ್ದೇಶಕರ ಎಲ್ಲಾ ಸೂಚನೆಗಳನ್ನು ಅನುಸರಿಸುತ್ತಾರೆ. ಭಾರತದಲ್ಲಿ ನಿರ್ವಹಿಸುತ್ತಿರುವ ಕಂಪನಿಯ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ಚೀನಾದ ನಿರ್ದೇಶಕರು ಅಧಿಕೃತ ಸಹಿದಾರರಾಗಿದ್ದಾರೆ ಮತ್ತು ಚೀನಾದ ಮೂಲಕ ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಇಡಿ ಹೇಳಿದೆ.

“ಚೀನಾದ ವ್ಯಕ್ತಿಗಳ ಸೂಚನೆಗಳ ಮೇರೆಗೆ ಕಂಪನಿಯು ಮಾರುಕಟ್ಟೆ ವೆಚ್ಚದ ಹೆಸರಿನಲ್ಲಿ ಸುಮಾರು 82 ಕೋಟಿ ರೂ.ಗಳನ್ನು ಚೀನಾಕ್ಕೆ ರವಾನಿಸಿದೆ. ದಾಳಿ ವೇಳೆ ಮಹತ್ವದ ಪಣೆಯ ದಾಖಲೆಗಳು ಮತ್ತು ಫೋರೆನ್ಸಿಕ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ. ಕಂಪನಿಯ ಮಾಜಿ ನಿರ್ದೇಶಕರಾದ ಸುಶಾಂತ್ ಶ್ರೀವಾಸ್ತವ, ಪ್ರಿಯಾಂಕಾ ಖಂಡೇಲಾವಾಲ್ ಮತ್ತು ಹಿಮಾಂಶು ಗಾರ್ಗ್ (ಕಳೆದ ವರ್ಷ ರಾಜೀನಾಮೆ ನೀಡಿದವರು) ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ” ಎಂದು ಇಡಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Thu, 27 April 23

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​