AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರಿನ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್ ಮೇಲೆ ಇಡಿ ದಾಳಿ ಕೇಸ್​ಗೆ ಸಂಬಂಧಿಸಿದಂತೆ 1.27 ಕೋಟಿ ನಗದು ಮತ್ತು ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ರೂ ಹಣವನ್ನು ಫ್ರೀಜ್ ಮಾಡಿದ್ದಾರೆ. ಎಸ್‍ಬಿಐ ಸೇರಿದಂತೆ ಬ್ಯಾಂಕ್‌ಗಳಿಗೆ 899 ಕೋಟಿ ರೂ ವಂಚಿಸಿದ ಆರೋಪ ಕೇಳಿಬಂದಿದೆ.

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್
ಇಡಿ Image Credit source: thehindu.com
ಶಿವಪ್ರಸಾದ್​ ಬಿ.
| Edited By: |

Updated on: Jun 01, 2026 | 10:11 PM

Share

ಬೆಂಗಳೂರು, ಜೂನ್​ 01: ನಗರದಲ್ಲಿ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್​​ನಿಂದ ವಿವಿಧ ಬ್ಯಾಂಕ್​ಗಳಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ದಾಳಿ ವೇಳೆ ಕಂಪನಿಗೆ ಸಂಬಂಧಿಸಿದ 1.27 ಕೋಟಿ ರೂ ನಗದು ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 18 ಕೋಟಿ ರೂ ಹಣವನ್ನೂ ಫ್ರೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಮಾಹಿತಿ ನೀಡಿದೆ.

ಮುಖ್ಯಾಂಶಗಳು

  • ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ ಕೇಸ್​
  • ಕಂಪನಿಗೆ ಸಂಬಂಧಿಸಿದ 1.27 ಕೋಟಿ ನಗದು ಮತ್ತು ಚಿನ್ನಾಭರಣ ಜಪ್ತಿ
  • ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ಹಣ ಫ್ರೀಜ್

ಬ್ಯಾಂಕ್​​ಗಳಿಗೆ 899 ಕೋಟಿ ರೂ ವಂಚನೆ 

ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ಎಸ್​​ಬಿಐ ಸೇರಿದಂತೆ ವಿವಿಧ ಬ್ಯಾಂಕ್​ಗಳಿಂದ ಅತಿ ಹೆಚ್ಚು ಪ್ರಮಾಣದಲ್ಲಿ ಸಾಲ ಪಡೆದುಕೊಂಡಿತ್ತು. ಆದರೆ, ಆ ಸಾಲದ ಹಣವನ್ನು ಉದ್ದೇಶಿತ ಉದ್ದೇಶಕ್ಕೆ ಬಳಸದೆ, ಬೇರೆ ಕಡೆಗೆ ವರ್ಗಾವಣೆ ಮಾಡುವ ಮೂಲಕ ಒಟ್ಟು 899 ಕೋಟಿ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವಂಚನೆಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ದಾಖಲಿಸಿದ್ದ ಇದೇ ಪ್ರಕರಣದ ಆಧಾರದ ಮೇಲೆ ಇದೀಗ ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ’: ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ

ಬೆಂಗಳೂರಿನ ಇ.ಡಿ ಅಧಿಕಾರಿಗಳ ನೇತೃತ್ವದ ತಂಡವು ಇತ್ತೀಚೆಗೆ ಅಂದರೆ ಮೇ 21 ಹಾಗೂ ಮೇ 29ರಂದು ದೀಪಕ್ ಕೇಬಲ್ ಇಂಡಿಯಾ ಲಿಮಿಟೆಡ್‌ನ ನಿರ್ದೇಶಕ ಕೆ. ವೆಂಕಟೇಶ್ವರ್ ರಾವ್ ಮತ್ತು ಅಧುನಿಕ್ ಕಾರ್ಪೊರೇಷನ್ ಲಿಮಿಟೆಡ್‌ನ ನಿರ್ದೇಶಕ ಮಹೇಶ್ ಅಗರ್ವಾಲ್ ಅವರಿಗೆ ಸೇರಿದ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ

ಇನ್ನು ದಾಳಿ ಸಂದರ್ಭದಲ್ಲಿ ವಂಚನೆಗೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸದ್ಯ ಜಪ್ತಿ ಮಾಡಲಾದ ನಗದು, ಚಿನ್ನಾಭರಣ ಹಾಗೂ ಫ್ರೀಜ್ ಮಾಡಲಾದ ಬ್ಯಾಂಕ್ ಖಾತೆಗಳ ವಿವರಗಳೊಂದಿಗೆ ಇಡಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ