AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ

ಬೆಳ್ಳಂಬೆಳಿಗ್ಗೆ ಬಿಲ್ಡರ್ಸ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​​ಗಳಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಬಿಲ್ಡರ್ಸ್​ಗಳಿಗೆ ನಡುಕ ಶುರುವಾಗಿದೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ
ಆದಾಯ ತೆರಿಗೆ ಇಲಾಖೆ
ವಿವೇಕ ಬಿರಾದಾರ
|

Updated on:Dec 17, 2024 | 2:54 PM

Share

ಬೆಂಗಳೂರು, ಡಿಸೆಂಬರ್​ 17: ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​ಗಳಿಗೆ (Builders) ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂರನೇ ದಾಳಿ ಇದಾಗಿದೆ.

ಐಟಿ ಅಧಿಕಾರಿಗಳು ಕಳೆದ ತಿಂಗಳು ನವೆಂಬರ್ 27 ರಂದು​ ಬೆಂಗಳೂರಿನ 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ಏಕಕಾಲಕ್ಕೆ ದಾಳಿ ಮಾಡಿದ್ದರು. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಆದಾಯ ತೆರಿಗೆ ಪಾವತಿ: ಮಹಿಳೆಯರ ಸಂಖ್ಯೆಯಲ್ಲಿ ಶೇ. 25ರಷ್ಟು ಏರಿಕೆ; ಎರಡು ಕೋಟಿಗೂ ಅಧಿಕ ಮಹಿಳೆಯರಿಂದ ಐಟಿಆರ್ ಸಲ್ಲಿಕೆ

ಇದಕ್ಕೂ ಮುನ್ನ ನವೆಂಬರ್​ 07 ರಂದು ಐಟಿ ಅಧಿಕಾರಿಗಳು ಬೆಂಗಳೂರಿನ ಕೆಲವು ಕಂಪನಿಗಳಿಗೆ ಚುರುಕು ಮುಟ್ಟಿಸಿದ್ದರು. ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ್ದರು. ಕೆಲಸದ ಮೂಡ್​ನಲ್ಲಿದ್ದ ಸಿಬ್ಬಂದಿಗೆ ಶಾಕ್​ ನೀಡಿದ್ದರು.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.

ವರದಿ: ಪ್ರದೀಪ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:33 am, Tue, 17 December 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು