AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru ED Raid: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

ಬೆಂಗಳೂರು ಇಡಿ ದಾಳಿ: ಆಡಳಿತಾರೂಢ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಜಾರಿ ನಿರ್ದೇಶನಾಲಯ ಗುರುವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಸುಬ್ಬಾರೆಡ್ಡಿ ಮನೆಗಳು ಸೇರಿದಂತೆ ಬೆಂಗಳೂರಿನ 5 ಕಡೆ ಇಡಿ ದಾಳಿ ನಡೆದಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಡಿ ದಾಳಿ ನಡೆಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Bengaluru ED Raid: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ
ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ
ಗಣಪತಿ ಶರ್ಮಾ
|

Updated on:Jul 10, 2025 | 12:14 PM

Share

ಬೆಂಗಳೂರು, ಜುಲೈ 10: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ (Subba Reddy) ಮನೆಗಳ ಮೇಲೆ ಸೇರಿದಂತೆ ಒಟ್ಟು ಬೆಂಗಳೂರಿನ (Bengaluru) 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್​ ಅಕೌಂಟ್​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ.

ಬೆಳಗ್ಗೆ 7 ಗಂಟೆಗೆ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ ನಡೆದಿದೆ. ಒಟ್ಟು ಐದು ಕಾರುಗಳಲ್ಲಿ 6 ಮಂದಿ ಇಡಿ ಅಧಿಕಾರಿಗಳು ಆಗಮಿಸಿದ್ದು, 7 ಸಿಬ್ಬಂದಿಯೂ ಜತೆಗಿದ್ದಾರೆ. ಮಾರತಹಳ್ಳಿ ಬಳಿ ಇರುವ ಸುಬ್ಬಾರೆಡ್ಡಿ ನಿವಾಸದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ
Image
ದಾವಣಗೆರೆ: ಮೂರೇ ತಿಂಗಳಲ್ಲಿ 50 ಲಕ್ಷ ರೂ. ತೆರಿಗೆ ಸಂಗ್ರಹಿಸಿದ ಮಹಿಳೆಯರು!
Image
ಉಗ್ರ ನಾಸೀರ್ ಜೈಲಿನಿಂದ ತಪ್ಪಿಸಿಕೊಳ್ಳಲು ನಡೆದಿತ್ತು ಸಿನಿಮೀಯ ರೀತಿ ಸಂಚು!
Image
ದೆಹಲಿಯಲ್ಲಿ ಸಿಎಂ, ಡಿಸಿಎಂ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ
Image
ಭೇಟಿ ಸಕ್ಸಸ್: ಸಿದ್ದರಾಮಯ್ಯ ಬೇಡಿಕೆಗಳಿಗೆ ಸ್ಪಂದಿಸಿದ ರಕ್ಷಣಾ ಸಚಿವ!

ಶಾಸಕ ಸುಬ್ಬಾರೆಡ್ಡಿ ನಿವಾಸದಲ್ಲಿ ಇಡಿ ಅಧಿಕಾರಿಗಳ ಪರಿಶೀಲನೆ ಮಧ್ಯಾಹ್ನವಾದರೂ ಮುಂದುವರಿದಿದೆ. ಸುಬ್ಬಾರೆಡ್ಡಿ ನಿವಾಸ, ಕಚೇರಿಯಲ್ಲಿ ಇಡಿ ಅಧಿಕಾರಿಗಳಿಂದ ತೀವ್ರ ಶೋಧ ನಡೆಯುತ್ತಿದೆ. ಬ್ಯಾಂಕ್ ಖಾತೆ ಸೇರಿ ಹಲವು ಮಾಹಿತಿಗಳನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

ಈ ಮಧ್ಯೆ, ಸುಬ್ಬಾರೆಡ್ಡಿ ಮನೆಗಳ ಮೇಲೆ ಇಡಿ ದಾಳಿ ನಡೆದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಜೂನ್ 25 ರಂದು, ಎಂಜಿನಿಯರಿಂಗ್ ಸೀಟು ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದ ಸುಮಾರು 18 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚರಣೆ ನಡೆಸಿತ್ತು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು, ಆಕಾಶ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಇತರ ಕಾಲೇಜುಗಳ ಮೇಲೆ ದಾಳಿ ನಡೆದಿತ್ತು.

ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಮೇ 21 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Thu, 10 July 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ