AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗಗೆ ಇಡಿಯಿಂದ ಸಮನ್ಸ್‌ ಜಾರಿ; ಜೂ.26ರಂದು ವಿಚಾರಣೆಗೆ ಬರುವಂತೆ ಆದೇಶ

ಕಳೆದ ವರ್ಷ ಜೂನ್ 26ರಂದು ಮಂತ್ರಿ ಗ್ರೂಪ್ ಮೇಲೆ ಐಟಿ ದಾಳಿ ಮಾಡಿತ್ತು. ಆಗ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದ ಐಟಿ ದಾಖಲೆಗಳ ಸಮೇತ ಇಡಿಗೆ ಮಾಹಿತಿ ನೀಡಿತ್ತು. ಐಟಿ ಅಧಿಕಾರಿಗಳ ಮಾಹಿತಿ ಆಧಾರದಲ್ಲಿ ಈಗ ಜೂ.26ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್‌ ಜಾರಿ ಮಾಡಿದೆ.

ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗಗೆ ಇಡಿಯಿಂದ ಸಮನ್ಸ್‌ ಜಾರಿ; ಜೂ.26ರಂದು ವಿಚಾರಣೆಗೆ ಬರುವಂತೆ ಆದೇಶ
TV9 Web
| Edited By: |

Updated on:Jun 23, 2022 | 10:00 PM

Share

ಬೆಂಗಳೂರು: ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗಗೆ ಜೂ.26ರಂದು ವಿಚಾರಣೆಗೆ ಬರುವಂತೆ ಇಡಿಯಿಂದ(Enforcement Directorate) ಸಮನ್ಸ್‌ ಜಾರಿಯಾಗಿದೆ. ವೈಯಕ್ತಿಕ ಮತ್ತು ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಹಿನ್ನೆಲೆ ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆಕ್ಟ್ ಅಡಿ ಇಡಿ ಸಮನ್ಸ್‌ ಜಾರಿ ಮಾಡಿದೆ. ಕಳೆದ ವರ್ಷ ಜೂನ್ 26ರಂದು ಮಂತ್ರಿ ಗ್ರೂಪ್ ಮೇಲೆ ಐಟಿ ದಾಳಿ ಮಾಡಿತ್ತು. ಆಗ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದ ಐಟಿ ದಾಖಲೆಗಳ ಸಮೇತ ಇಡಿಗೆ ಮಾಹಿತಿ ನೀಡಿತ್ತು. ಐಟಿ ಅಧಿಕಾರಿಗಳ ಮಾಹಿತಿ ಆಧಾರದಲ್ಲಿ ಈಗ ಜೂ.26ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್‌ ಜಾರಿ ಮಾಡಿದೆ.

ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ 2019ರ ಜುಲೈನಲ್ಲಿ ಮಂತ್ರಿ ಡೆವಲಪರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿದ್ದವು. ಕಬ್ಬನ್ ಪಾರ್ಕ್ ಪೊಲೀಸರ ಮನವಿಯನ್ವಯ ಮಂತ್ರಿ ಡೆವಲಪರ್ಸ್ ಸಂಸ್ಥಾಪಕ ಸುಶೀಲ್ ಪಾಂಡುರಂಗ ವಿರುದ್ಧ ಲುಕ್ ಔಟ್ ನೊಟೀಸ್ ಸಹ ಜಾರಿಯಾಗಿತ್ತು. 2019ರಲ್ಲಿ ಸಿಂಗಪುರ್ ವಿಮಾನವೇರುವ ಮುನ್ನ ಸುಶೀಲ್ ಪಾಂಡುರಂಗ ಮಂತ್ರಿಯ ಪತ್ನಿ ಸ್ನೇಹಲ್ ಮಂತ್ರಿಯನ್ನ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು.ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್​-ಜಾಕ್ವೆಲಿನ್ Mantri groups

ಲಂಚ ಸ್ವೀಕರಿಸುತ್ತಿದ್ದ ಬಿಇಒ, ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್, ಅಧೀಕ್ಷಕ ಶಂಕರ್ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರ ನಿವೃತ್ತ ವೇತನಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನ ಮಹಾಲೆಕ್ಕಾಧಿಕಾರಿಗಳ ಕಚೇರಿಗೆ ತಲುಪಿಸಲು ಶಿಕ್ಷಕರ ಬಳಿ 9 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಿಕ್ಷಕರು, ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಚಂದ್ರಕಾಂತ್ ಹಾಗೂ 2 ಸಾವಿರ ಲಂಚ ಸ್ವೀಕರಿಸುತ್ತಿದ್ದ ಶಂಕರ್ ಬಲೆಗೆ ಬಿದ್ದಿದ್ದಾರೆ.

Published On - 9:49 pm, Thu, 23 June 22

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ