AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​ ಸ್ಟ್ರೀಟ್​ನಲ್ಲಿ ಎಡ್ ಶೀರನ್ ಗಾಯನಕ್ಕೆ ಬ್ರೇಕ್​ ಹಾಕಿದ್ದೇಕೆ ಪೊಲೀಸರು? ಅಸಲಿಗೆ ನಡೆದಿದ್ದೇನೆಂಬ ವಿವರ ಇಲ್ಲಿದೆ

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಗಾಯಕ ಎಡ್ ಶೀರನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ತಡೆದಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಪೊಲೀಸರ ನಿರ್ಧಾರಕ್ಕೆ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅಷ್ಟಕ್ಕೂ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಿದ್ದು ಏಕೆ?, ಚರ್ಚ್​ ಸ್ಟ್ರೀಟ್​ನಲ್ಲಿ ನಡೆದಿದ್ದು ಏನು? ಇಲ್ಲಿದೆ ಕಾರಣ

ಚರ್ಚ್​ ಸ್ಟ್ರೀಟ್​ನಲ್ಲಿ ಎಡ್ ಶೀರನ್ ಗಾಯನಕ್ಕೆ ಬ್ರೇಕ್​ ಹಾಕಿದ್ದೇಕೆ ಪೊಲೀಸರು? ಅಸಲಿಗೆ ನಡೆದಿದ್ದೇನೆಂಬ ವಿವರ ಇಲ್ಲಿದೆ
ಎಡ್​ ಶೀರನ್​
ವಿವೇಕ ಬಿರಾದಾರ
|

Updated on:Feb 10, 2025 | 2:58 PM

Share

ಬೆಂಗಳೂರು, ಫೆಬ್ರವರಿ 10: ಖ್ಯಾತ ಇಂಗ್ಲಿಷ್​​​​ ಗಾಯಕ ಎಡ್ ಶೀರನ್​ರ (Ed Sheeran) ಚರ್ಚ್​ ಸ್ಟ್ರೀಟ್​ನಲ್ಲಿನ (Church Street) ಸಂಗೀತ ಕಾರ್ಯಕ್ರಮವನ್ನು ಪೊಲೀಸರು ತಡೆದಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಎಡ್​ ಶಿರನ್​​ರ ಕಾರ್ಯಕ್ರಮವನ್ನು ತಡೆದಿದ್ದಕ್ಕೆ ಕೆಲ ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಪೊಲೀಸರಿಗೆ ಬೆಂಬಲವಾಗಿ ನಿಂತಿದ್ದಾರೆ. ಅಷ್ಟಕ್ಕೂ ರವಿವಾರ ಚರ್ಚ್​ ಸ್ಟ್ರೀಟ್​ನಲ್ಲಿ ನಡೆದಿದ್ದು ಏನು? ಖ್ಯಾತ ಗಾಯಕ ಎಡ್ ಶೀರನ್ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ತಡೆದಿದ್ದು ಏಕೆ? ಎಂಬ ಅಸಲಿ ಸತ್ಯ ಬಯಲಾಗಿದೆ.

ಚರ್ಚ್​ ಸ್ಟ್ರೀಟ್​ನಲ್ಲಿ ನಡೆದಿದ್ದು ಏನು?

ಗ್ಯ್ರಾಮಿ ಅವಾರ್ಡ್​ ವಿಜೇತ ಎಡ್ ಶೀರನ್ ರವಿವಾರ ಮಧ್ಯಾಹ್ನ ಚರ್ಚ್​ ಸ್ಟ್ರೀಟ್​ನ ಫುಟ್​ಬಾತ್​ನಲ್ಲಿ ನಿಂತುಕೊಂಡು ತಮ್ಮ ಸಹ ಕಲಾವಿದರೊಂದಿಗೆ ಏಕಾಏಕಿ ಹಾಡಲು ಆರಂಭಿಸಿದರು. ಇವರು ಹಾಡು ಆರಂಭಿಸುತ್ತಿದ್ದಂತೆಯೇ ಸುತ್ತಮುತ್ತಲಿದ್ದ ಜನರು ಸೇರಲು ಆರಂಭಿಸಿದ್ದರು. ಸ್ಥಳದಲ್ಲಿ 50-100 ಜನರು ಜಮಾಯಿಸಿದ್ದಾರೆ. ಈ ವಿಚಾರ ತಿಳಿದ ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಾಡು ನಿಲ್ಲಿಸುವಂತೆ ಹೇಳಿದ್ದಾರೆ. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸುವಂತೆ ಹೇಳಿದ್ದಾರೆ. ಆದ್ರೆ, ಎಡ್ ಶೀರನ್ ಹಾಡು ನಿಲ್ಲಿಸಿಲ್ಲ. ಆಗ ಪೊಲೀಸರು, ಮೈಕ್​ ವೈರ್​ಗಳನ್ನು ಕಿತ್ತೆಸೆದು ಕಾರ್ಯಕ್ರಮವನ್ನು ತಡೆದಿದ್ದಾರೆ.

ಅನಮತಿ ಪಡೆಯದೇ ಕಾರ್ಯಕ್ರಮ ನಡೆಸಲಾಗುತ್ತಿತ್ತಾ?

ಗಾಯಕ ಎಡ್ ಶೀರನ್ ಚರ್ಚ್​ಸ್ಟ್ರೀಟ್​ನಲ್ಲಿ ಕಾರ್ಯಕ್ರಮ ಆರಂಭಿಸುವುದಕ್ಕಿಂತ ಮುನ್ನ ಅವರ ಸಹ ಕಲಾವಿದ ಸಂಜಯ್​ ಸಿಂಗ್​ ಎಂಬುವರು ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ಅನುಮತಿ ನೀಡುವಂತೆ ಕೇಳಿದ್ದಾರೆ. ಆದರೆ, ಕಬ್ಬನ್​ ಪಾರ್ಕ್​ ಪೊಲೀಸರು ಅನುಮತಿ ನೀಡಿಲ್ಲ. ಚರ್ಚ್​ ಸ್ಟ್ರೀಟ್​ ಜನಜಂಗಳಿಯಿಂದ ಕೂಡಿರುತ್ತದೆ. ಭಾನುವಾರ ಹೆಚ್ಚಿನ ಸಂಖ್ಯೆ ಜನರು ಅಲ್ಲಿ ಸೇರುತ್ತಾರೆ. ಈ ವೇಳೆ ಕಾರ್ಯಕ್ರಮ ನಡೆಸಿದರೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುತ್ತದೆ. ನಿಯಂತ್ರಿಸುವುದು ಕಷ್ಟವಾಗುತ್ತದೆ. ತೊಂದರೆಗಳು ಉಂಟಾಗಬಹುದು ಎಂದು ಪೊಲೀಸರು ಅನುಮತಿ ನೀಡಿಲ್ಲ.

ಪೊಲೀಸರು ಅನುಮತಿ ನೀಡದಿದ್ದರೂ ಗಾಯಕ ಎಡ್​ ಶೀರನ್​ ಚರ್ಚ್​ಸ್ಟ್ರೀಟ್​ನಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಎಡ್​ ಶೀರನ್​ ಚರ್ಚ್​ಸ್ಟ್ರೀಟ್​ನಲ್ಲಿ ಕಾರ್ಯಕ್ರಮ ನಡೆಸಿದ್ದು ಏಕೆ?

ಬುಕ್ ಮೈ ಶೋ ಬಿಐಇಸಿ ಮಾದಾವರ ಮೈದಾನದಲ್ಲಿ ರವಿವಾರ (ಫೆ.09) ಸಂಜೆ ಎಡ್​ ಶೀರನ್​ ಅವರ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ಇನ್ನಷ್ಟು ಪ್ರಚಾರ ಸಿಗಲಿ, ಕಾರ್ಯಕ್ರಮದ ಮಾಹಿತಿ ಹೆಚ್ಚು ಜನರಿಗೆ ತಲುಪಲಿ ಎಂಬ ಉದ್ದೇಶದಿಂದ ಕಾಂಟೆಂಟ್​ ಬಿಲ್ಡ್​ ಮಾಡಲು ಎಡ್​ ಶೀರನ್​ ಚರ್ಚ್​ಸ್ಟ್ರೀಟ್​ನ ಫುಟ್​ಪಾತ್​ ಮೇಲೆ ಏಕಾಏಕಿ ಹಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಅನುಮತಿ ಕಡ್ಡಾಯ

ಬೆಂಗಳೂರಿನ ಯಾವುದೇ ಪ್ರದೇಶದಲ್ಲಿ ಸಂಗೀತ ಕಾರ್ಯಕ್ರಮ ಅಥವಾ ಯಾವುದೇ ಮನರಂಜನಾ ಕಾರ್ಯಕ್ರಮ ನಡೆಸುವ ಮುನ್ನ ಹಾಗೂ ಚಲನಚಿತ್ರ ಚಿತ್ರೀಕರಣ, ದಾರವಾಹಿ ಚಿತ್ರೀಕರಣ ಮಾಡುವ ಮುನ್ನ ಸ್ಥಳೀಯ ಪೊಲೀಸ್​ ಠಾಣೆ, ಸಂಚಾರಿ ಪೊಲೀಸ್​ ಠಾಣೆ, ಪಾಲಿಕೆ ವ್ಯಾಪ್ತಿಗೆ ಒಳಪಟ್ಟಿದ್ದರೆ ಬಿಬಿಎಂಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ನಿರ್ಬಂಧ ವಿಧಿಸಿದ್ದ ಬಿಬಿಎಂಪಿ

2024ರ ಫೆಬ್ರವರಿಯಲ್ಲಿ ಚರ್ಚ್​ಸ್ಟ್ರೀಟ್​ನಲ್ಲಿ ಮಳಯಾಳಂ ಸಿನಿಮಾವೊಂದು ಚಿತ್ರೀಕರಣಗೊಂಡಿತ್ತು. ಈ ವಿಚಾರವನ್ನು ತಿಳಿದ ಬಿಬಿಎಂಪಿ ಚರ್ಚ್​ಸ್ಟ್ರೀಟ್​ನಲ್ಲಿ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿತ್ತು. ಈ ವಿಚಾರವಾಗಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Mon, 10 February 25

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?