AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ: ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮರಿಗೆ ಸೇರಿದ 3.35 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ

ಅಧಿಕಾರ ದುರುಪಯೋಗಪಡಿಸಿಕೊಂಡು 2010-2013ರವರೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ರು. ಹೀಗಾಗಿ ಸಿ.ಜಿ.ಗೌರಮ್ಮ, ಪತಿ ಗೋವಿಂದರಾಜು ವಿರುದ್ಧ ಕೇಸ್ ದಾಖಲಾಗಿತ್ತು.

ಅಕ್ರಮ ಆಸ್ತಿ ಗಳಿಕೆ: ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮರಿಗೆ ಸೇರಿದ 3.35 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 02, 2022 | 7:46 PM

Share

ಬೆಂಗಳೂರು: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನ ಆಜಾದ್‌ನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಸಿ.ಜಿ.ಗೌರಮ್ಮ ಅವರಿಗೆ ಸೇರಿದ 3.35 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ.

ಅಧಿಕಾರ ದುರುಪಯೋಗಪಡಿಸಿಕೊಂಡು 2010-2013ರವರೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ರು. ಹೀಗಾಗಿ ಸಿ.ಜಿ.ಗೌರಮ್ಮ, ಪತಿ ಗೋವಿಂದರಾಜು ವಿರುದ್ಧ ಕೇಸ್ ದಾಖಲಾಗಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 13 (2) ಮತ್ತು ಭಾರತೀಯ ದಂಡ ಸಂಹಿತೆಯ 120 (ಬಿ) ಅಡಿಯಲ್ಲಿ ಅಪರಾಧಕ್ಕಾಗಿ ಬೆಂಗಳೂರಿನ ಆಜಾದ್ ನಗರದ ವಾರ್ಡ್ ನಂ.141ನ ಮಾಜಿ ಕಾರ್ಪೊರೇಟರ್ ಸಿ.ಜಿ.ಗೌರಮ್ಮ ಮತ್ತು ಅವರ ಪತಿ ಸಿ.ಗೋವಿಂದರಾಜು ವಿರುದ್ಧ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.

ಸಿ.ಜಿ. ಗೌರಮ್ಮ ಅವರು ಕಾರ್ಪೊರೇಟರ್ ಆಗಿ ಈ ಅವಧಿಯಲ್ಲಿ ತಮ್ಮ ಅಧಿಕೃತ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ಪತಿ ಸಿ.ಗೋವಿಂದರಾಜು ಅವರೊಂದಿಗೆ ಶಾಮೀಲಾಗಿ ಅಪರಾಧದ ಆದಾಯವನ್ನು ಸೃಷ್ಟಿಸಿದ್ದಾರೆ. ಅದನ್ನು ನಗದು ರೂಪದಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಮೂಲಕ ಮತ್ತು ವಿವಿಧ ಸ್ಥಿರಾಸ್ತಿಗಳನ್ನು ನಗದು ರೂಪದಲ್ಲಿ ಪಡೆಯುವ ಮೂಲಕ ಅಪರಾಧದ ಆದಾಯವನ್ನು ಲಪಟಾಯಿಸಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಸಿ.ಜಿ. ಗೌರಮ್ಮ ಮತ್ತು ಅವರ ಪತಿ ಸಿ. ಗೋವಿಂದರಾಜು ಅವರು 2010-11 ರಿಂದ 2012-13ರ ಹಣಕಾಸು ವರ್ಷದಲ್ಲಿ 3.46 ಕೋಟಿ ರೂ.ಗಳ ಅಕ್ರಮ ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗೆ ಗುರುತಿಸಲಾದ ಸ್ಥಿರ ಆಸ್ತಿಗಳಲ್ಲಿ ಕೃಷಿ ಭೂಮಿ, ವಸತಿ ನಿವೇಶನಗಳು ಮತ್ತು ವಾಣಿಜ್ಯ ನಿವೇಶನಗಳು ಸೇರಿವೆ. ಈ ಪ್ರಕರಣದಲ್ಲಿ ಆಜಾದ್ ನಗರದ ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮ ಅವರಿಗೆ ಸಂಬಂಧಿಸಿದಂತ 3.35 ಕೋಟಿ ರೂ ಸ್ಥಿರಾಸ್ತಿಯನ್ನು ಸೀಜ್ ಮಾಡಿದೆ.

Published On - 7:46 pm, Tue, 2 August 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್