ಅಕ್ರಮ ಆಸ್ತಿ ಗಳಿಕೆ: ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮರಿಗೆ ಸೇರಿದ 3.35 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ

ಅಧಿಕಾರ ದುರುಪಯೋಗಪಡಿಸಿಕೊಂಡು 2010-2013ರವರೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ರು. ಹೀಗಾಗಿ ಸಿ.ಜಿ.ಗೌರಮ್ಮ, ಪತಿ ಗೋವಿಂದರಾಜು ವಿರುದ್ಧ ಕೇಸ್ ದಾಖಲಾಗಿತ್ತು.

ಅಕ್ರಮ ಆಸ್ತಿ ಗಳಿಕೆ: ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮರಿಗೆ ಸೇರಿದ 3.35 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Aug 02, 2022 | 7:46 PM

ಬೆಂಗಳೂರು: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನ ಆಜಾದ್‌ನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಸಿ.ಜಿ.ಗೌರಮ್ಮ ಅವರಿಗೆ ಸೇರಿದ 3.35 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ.

ಅಧಿಕಾರ ದುರುಪಯೋಗಪಡಿಸಿಕೊಂಡು 2010-2013ರವರೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ರು. ಹೀಗಾಗಿ ಸಿ.ಜಿ.ಗೌರಮ್ಮ, ಪತಿ ಗೋವಿಂದರಾಜು ವಿರುದ್ಧ ಕೇಸ್ ದಾಖಲಾಗಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 13 (2) ಮತ್ತು ಭಾರತೀಯ ದಂಡ ಸಂಹಿತೆಯ 120 (ಬಿ) ಅಡಿಯಲ್ಲಿ ಅಪರಾಧಕ್ಕಾಗಿ ಬೆಂಗಳೂರಿನ ಆಜಾದ್ ನಗರದ ವಾರ್ಡ್ ನಂ.141ನ ಮಾಜಿ ಕಾರ್ಪೊರೇಟರ್ ಸಿ.ಜಿ.ಗೌರಮ್ಮ ಮತ್ತು ಅವರ ಪತಿ ಸಿ.ಗೋವಿಂದರಾಜು ವಿರುದ್ಧ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.

ಸಿ.ಜಿ. ಗೌರಮ್ಮ ಅವರು ಕಾರ್ಪೊರೇಟರ್ ಆಗಿ ಈ ಅವಧಿಯಲ್ಲಿ ತಮ್ಮ ಅಧಿಕೃತ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ಪತಿ ಸಿ.ಗೋವಿಂದರಾಜು ಅವರೊಂದಿಗೆ ಶಾಮೀಲಾಗಿ ಅಪರಾಧದ ಆದಾಯವನ್ನು ಸೃಷ್ಟಿಸಿದ್ದಾರೆ. ಅದನ್ನು ನಗದು ರೂಪದಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಮೂಲಕ ಮತ್ತು ವಿವಿಧ ಸ್ಥಿರಾಸ್ತಿಗಳನ್ನು ನಗದು ರೂಪದಲ್ಲಿ ಪಡೆಯುವ ಮೂಲಕ ಅಪರಾಧದ ಆದಾಯವನ್ನು ಲಪಟಾಯಿಸಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಸಿ.ಜಿ. ಗೌರಮ್ಮ ಮತ್ತು ಅವರ ಪತಿ ಸಿ. ಗೋವಿಂದರಾಜು ಅವರು 2010-11 ರಿಂದ 2012-13ರ ಹಣಕಾಸು ವರ್ಷದಲ್ಲಿ 3.46 ಕೋಟಿ ರೂ.ಗಳ ಅಕ್ರಮ ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗೆ ಗುರುತಿಸಲಾದ ಸ್ಥಿರ ಆಸ್ತಿಗಳಲ್ಲಿ ಕೃಷಿ ಭೂಮಿ, ವಸತಿ ನಿವೇಶನಗಳು ಮತ್ತು ವಾಣಿಜ್ಯ ನಿವೇಶನಗಳು ಸೇರಿವೆ. ಈ ಪ್ರಕರಣದಲ್ಲಿ ಆಜಾದ್ ನಗರದ ಮಾಜಿ ಕಾರ್ಪೊರೇಟರ್ ಸಿ.ಜಿ ಗೌರಮ್ಮ ಅವರಿಗೆ ಸಂಬಂಧಿಸಿದಂತ 3.35 ಕೋಟಿ ರೂ ಸ್ಥಿರಾಸ್ತಿಯನ್ನು ಸೀಜ್ ಮಾಡಿದೆ.

Published On - 7:46 pm, Tue, 2 August 22

‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್