AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ
ಶಿಕ್ಷಣ ತಜ್ಞರೊಂದಿಗೆ ರಾಹುಲ್​ ಗಾಂಧಿ ಸಂವಾದ
TV9 Web
| Updated By: ವಿವೇಕ ಬಿರಾದಾರ|

Updated on:Oct 07, 2022 | 6:25 PM

Share

ಬೆಂಗಳೂರು: ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ (Education Emergency)  ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ (Rajyasbha) ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ರೀತಿಯ ಕಾಸ್ಟ್​​ಸಿಸ್ಟಮ್ ಬಂದು ಸಮಸ್ಯೆಗಳು ಸೃಷ್ಟಿ ಆಗುತ್ತಿದೆ. ಹಿಜಾಬ್ ವಿವಾದದಿಂದ ಹೆಣ್ಣು ಮಕ್ಕಳಿಗೆ ಅವಕಾಶ ಸಿಗುತ್ತಿಲ್ಲ ಅನ್ನೋ ಚರ್ಚೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೊತೆಗೆ ಆಗಿದೆ. ಮ್ಯಾನಿಫೆಸ್ಟೋ ಸಿದ್ದಪಡಿಸುವಾಗ ಕಾಂಗ್ರೆಸ್ ಈ ಎಲ್ಲ ಅಭಿಪ್ರಾಯ ಅಪೇಕ್ಷೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಇಂದು ಬಿಜೆಪಿ‌ ಸರ್ಕಾರ ತಂದಿರುವ ಶಿಕ್ಷಣ ನೀತಿ ಬಗ್ಗೆ ಚರ್ಚೆ ಆಗುತ್ತಿದೆ. ಎನ್​ಇಪಿ ಬಂದ ಮೇಲೆ ಮೂರು ದೊಡ್ಡ ಸಮಸ್ಯೆಗಳಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಕಮ್ಯುನಲ್ ಪಾಯ್ಸನ್ ಅಂಶ ಬಂದುಬಿಟ್ಟಿವೆ. ಹೊಸ ಮಿಥಾಲಜಿ ಸೃಷ್ಟಿ ಮಾಡಿ ಐಡಿಯಾಲಜಿ ತುಂಬುವ ಪ್ರಯತ್ನ ನಡೆಯುತ್ತಿದೆ ಆರ್​​ಎಸ್​​ಎಸ್​​ನವರಿಗೆ ಸರ್ಕಾರದಿಂದ ಹಣ ಹೋಗುತ್ತಿದೆ. ಇದನ್ನು ಎಕ್ಸಪೋಸ್ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಬಜೆಟ್ ಸ್ಕೂಲ್ ಮಾಲೀಕರು, ಶಿಕ್ಷಣ ನೀತಿ ತಜ್ಞರು ಹಾಗೂನ್ಯಾಷನಲ್ ಲಾ ಸ್ಕೂಲ್ ಪ್ರೊಫೆಸರ್​ಗಳ ಜೊತೆ ಸಂವಾದ ನಡೆಸಿದರು.

ಸಂವಾದದಲ್ಲಿ ಶಿಕ್ಷಣ ತಜ್ಞರು, ಪೋಷಕ ಸಂಘಟನೆ ಹಿಂದಿ ಹೇರಿಕೆ ವಿರೋಧಿಸಿದರು. ಮಾತೃಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದರು. ಆಗ ರಾಹುಲ್ ಗಾಂಧಿ ಎಲ್ಲ ಭಾಷೆಗಳಿಗೂ ಮಾನ್ಯತೆ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 5:38 pm, Fri, 7 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ