AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. -ಸಚಿವ ಬಿ.ಸಿ ನಾಗೇಶ್

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 12, 2022 | 1:51 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ಸಧ್ಯ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊರೊನಾ ಕೇಸ್ ಹೆಚ್ಚಾದ್ರೂ ರಾಜ್ಯದಲ್ಲಿ ಶಾಲೆ ಬಂದ್ ಆಗಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. ನಾವು ಏನೇ ಪರ್ಯಾಯ ಮಾರ್ಗ ಅನುಸರಿಸಿದ್ರೂ ಅಷ್ಟಕಷ್ಟೆ. ಭೌತಿಕ ತರಗತಿಗಳಷ್ಟೇ ಮಕ್ಕಳ ಭವಿಷ್ಯಕ್ಕೆ ಅಡಿಪಾಯ. ಪರ್ಯಾಯ ಮಾರ್ಗ ಪರಿಣಾಮಕಾರಿ ಆಗೊಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ಶಾಲೆ ಬಂದ್ ಮಾಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಡಿಸಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 2 ಅಲೆಗಳಲ್ಲಿ ಶಾಲಾ ಕಾಲೇಜ್​ಗಳನ್ನ ಸಂಪೂರ್ಣವಾಗಿ ‌ಮುಚ್ಚಲಾಗಿತ್ತು. ಈ ಭಾರೀ ಪಾಸಿಟಿವಿಟಿ ರೇಟ್ ನೋಡಿಕೊಂಡು ಅಯಾ ಜಿಲ್ಲೆ, ತಾಲೂಕು ಮಟ್ಟದ ಶಾಲೆಗಳನ್ನ ಕ್ಲೋಸ್​ಗೆ ನಿರ್ಧಾರ ಮಾಡಲಾಗಿದೆ. ಶಾಲೆ ಬಂದ್ ಆದ್ರೂ, ಆನ್ ಲೈನ್ ಹಾಗೂ ವಿದ್ಯಾಗಮದ ಮೂಲಕ ಮಕ್ಕಳಿಗೆ ಶಿಕ್ಷಣ ‌ಕೊಡುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹಾಗೂ ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಸಚಿವರು ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒಗಳು ಭಾಗಿಯಾಗಿದ್ದು ಸಭೆಯಲ್ಲಿ ರಾಜ್ಯದ ಶಾಲೆಗಳ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

Published On - 1:45 pm, Wed, 12 January 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?