AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. -ಸಚಿವ ಬಿ.ಸಿ ನಾಗೇಶ್

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 12, 2022 | 1:51 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ಸಧ್ಯ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊರೊನಾ ಕೇಸ್ ಹೆಚ್ಚಾದ್ರೂ ರಾಜ್ಯದಲ್ಲಿ ಶಾಲೆ ಬಂದ್ ಆಗಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. ನಾವು ಏನೇ ಪರ್ಯಾಯ ಮಾರ್ಗ ಅನುಸರಿಸಿದ್ರೂ ಅಷ್ಟಕಷ್ಟೆ. ಭೌತಿಕ ತರಗತಿಗಳಷ್ಟೇ ಮಕ್ಕಳ ಭವಿಷ್ಯಕ್ಕೆ ಅಡಿಪಾಯ. ಪರ್ಯಾಯ ಮಾರ್ಗ ಪರಿಣಾಮಕಾರಿ ಆಗೊಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ಶಾಲೆ ಬಂದ್ ಮಾಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಡಿಸಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 2 ಅಲೆಗಳಲ್ಲಿ ಶಾಲಾ ಕಾಲೇಜ್​ಗಳನ್ನ ಸಂಪೂರ್ಣವಾಗಿ ‌ಮುಚ್ಚಲಾಗಿತ್ತು. ಈ ಭಾರೀ ಪಾಸಿಟಿವಿಟಿ ರೇಟ್ ನೋಡಿಕೊಂಡು ಅಯಾ ಜಿಲ್ಲೆ, ತಾಲೂಕು ಮಟ್ಟದ ಶಾಲೆಗಳನ್ನ ಕ್ಲೋಸ್​ಗೆ ನಿರ್ಧಾರ ಮಾಡಲಾಗಿದೆ. ಶಾಲೆ ಬಂದ್ ಆದ್ರೂ, ಆನ್ ಲೈನ್ ಹಾಗೂ ವಿದ್ಯಾಗಮದ ಮೂಲಕ ಮಕ್ಕಳಿಗೆ ಶಿಕ್ಷಣ ‌ಕೊಡುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹಾಗೂ ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಸಚಿವರು ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒಗಳು ಭಾಗಿಯಾಗಿದ್ದು ಸಭೆಯಲ್ಲಿ ರಾಜ್ಯದ ಶಾಲೆಗಳ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

Published On - 1:45 pm, Wed, 12 January 22

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ