AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. -ಸಚಿವ ಬಿ.ಸಿ ನಾಗೇಶ್

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Jan 12, 2022 | 1:51 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ಸಧ್ಯ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊರೊನಾ ಕೇಸ್ ಹೆಚ್ಚಾದ್ರೂ ರಾಜ್ಯದಲ್ಲಿ ಶಾಲೆ ಬಂದ್ ಆಗಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. ನಾವು ಏನೇ ಪರ್ಯಾಯ ಮಾರ್ಗ ಅನುಸರಿಸಿದ್ರೂ ಅಷ್ಟಕಷ್ಟೆ. ಭೌತಿಕ ತರಗತಿಗಳಷ್ಟೇ ಮಕ್ಕಳ ಭವಿಷ್ಯಕ್ಕೆ ಅಡಿಪಾಯ. ಪರ್ಯಾಯ ಮಾರ್ಗ ಪರಿಣಾಮಕಾರಿ ಆಗೊಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ಶಾಲೆ ಬಂದ್ ಮಾಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಡಿಸಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 2 ಅಲೆಗಳಲ್ಲಿ ಶಾಲಾ ಕಾಲೇಜ್​ಗಳನ್ನ ಸಂಪೂರ್ಣವಾಗಿ ‌ಮುಚ್ಚಲಾಗಿತ್ತು. ಈ ಭಾರೀ ಪಾಸಿಟಿವಿಟಿ ರೇಟ್ ನೋಡಿಕೊಂಡು ಅಯಾ ಜಿಲ್ಲೆ, ತಾಲೂಕು ಮಟ್ಟದ ಶಾಲೆಗಳನ್ನ ಕ್ಲೋಸ್​ಗೆ ನಿರ್ಧಾರ ಮಾಡಲಾಗಿದೆ. ಶಾಲೆ ಬಂದ್ ಆದ್ರೂ, ಆನ್ ಲೈನ್ ಹಾಗೂ ವಿದ್ಯಾಗಮದ ಮೂಲಕ ಮಕ್ಕಳಿಗೆ ಶಿಕ್ಷಣ ‌ಕೊಡುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹಾಗೂ ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಸಚಿವರು ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒಗಳು ಭಾಗಿಯಾಗಿದ್ದು ಸಭೆಯಲ್ಲಿ ರಾಜ್ಯದ ಶಾಲೆಗಳ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

Published On - 1:45 pm, Wed, 12 January 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!