AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ತೀರ್ಪು ಪಾಲಿಸಿ, ಶಿಕ್ಷಣ ನಿಲ್ಲಿಸಬೇಡಿ, ಕಾಲೇಜುಗಳಿಗೆ ಮರಳಿ ಬನ್ನಿ: ಶಿಕ್ಷಣ ಸಚಿವ ಬಿಸಿ ನಾಗೇಶ್

ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಹೈಕೋರ್ಟ್ ತೀರ್ಪು ಪಾಲಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದರು

ಹೈಕೋರ್ಟ್ ತೀರ್ಪು ಪಾಲಿಸಿ, ಶಿಕ್ಷಣ ನಿಲ್ಲಿಸಬೇಡಿ, ಕಾಲೇಜುಗಳಿಗೆ ಮರಳಿ ಬನ್ನಿ: ಶಿಕ್ಷಣ ಸಚಿವ ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Edited By: |

Updated on:Mar 15, 2022 | 11:16 AM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh), ವಸ್ತ್ರಸಂಹಿತೆಗೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೂ ನ್ಯಾಯಾಲಯ ಇಂದು ತನ್ನ ತೀರ್ಪಿನ ಮೂಲಕ ಉತ್ತರ ನೀಡಿದೆ ಎಂದು ಹೇಳಿದರು. ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಹೈಕೋರ್ಟ್ ತೀರ್ಪು ಪಾಲಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ಶಾಲೆ-ಕಾಲೇಜುಗಳಿಂದ ದೂರ ಉಳಿದಿರುವ ವಿದ್ಯಾರ್ಥಿನಿಯರು ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಬರಬೇಕು ಎಂದು ಕೋರಿದರು.

ನ್ಯಾಯಾಲಯದ ತೀರ್ಪು ಏನು ಬಂದರೂ ಗೌರವಿಸುತ್ತೇನೆ ಎಂದು ಈ ಮೊದಲು ಹೇಳಿದ್ದೆ. ಇಂದಿಗೂ ನನ್ನದು ಅದೇ ನಿಲುವು. ಬಿಜೆಪಿ ಸರ್ಕಾರ ಸದಾ ನ್ಯಾಯಾಲಯದ ತೀರ್ಪುಗಳನ್ನು ಗೌರವಿಸುತ್ತದೆ. ಇದು ಐತಿಹಾಸಿಕ ತೀರ್ಪು. ಈ ತೀರ್ಪಿನ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಇರುವ ಕೆಲ ಗೊಂದಲಗಳನ್ನು ಸರಿಪಡಿಸಲು ಯತ್ನಿಸುತ್ತೇವೆ ಎಂದು ಹೇಳಿದರು.

ಸಮವಸ್ತ್ರ ಎನ್ನುವುದು ರಾಷ್ಟ್ರೀಯ ಮಾನಸಿಕ ತರುವುದರಲ್ಲಿ ಸಾಕಷ್ಟು ಸಹಕಾರಿ. ಈ ವಿಷಯ ಹಲವು ವರ್ಷಗಳಿಂದ ನಮಗೆ ಮನವರಿಕೆ ಆಗಿದೆ. ನಾವೆಲ್ಲರು ದೇಶದ ಒಂದು ಆಂಗ. ಇದನ್ನು ಮನವರಿಕೆ ಮಾಡಿಕೊಡಲು ಯತ್ನಿಸುತ್ತೇವೆ. ಕೆಲ ಹೆಣ್ಣುಮಕ್ಕಳು ಮಿಸ್​ಗೈಡ್ ಆಗಿದ್ದಾರೆ. ಅವರ ಮನವೊಲಿಸಿ ವಿದ್ಯಾಭ್ಯಾಸ ಮುಂದುವರಿಸಲು ಪ್ರೇರಣೆ ಕೊಡುತ್ತೇವೆ. ಕರ್ನಾಟಕದ ಜನರು ಈ ಹಿಂದೆಯೂ ನ್ಯಾಯಾಲಯದ ತೀರ್ಪು ಗೌರವಿಸಿದ್ದಾರೆ. ಈ ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಸುಮಾರು 86 ಸಾವಿರ ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. ಈ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಬಗ್ಗೆ ಒತ್ತಾಯಿಸಿದ್ದರು. ಶೇ 99.9ರಷ್ಟು ವಿದ್ಯಾರ್ಥಿನಿಯರು ಪರೀಕ್ಷೆ ಮತ್ತು ಸಮವಸ್ತ್ರ ಅನುಸರಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: Big News: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು

ಇದನ್ನೂ ಓದಿ: Karnataka HC Verdict on Hijab Live: ಹಿಜಾಬ್ ವಿವಾದ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲವೆಂದು ಹೈಕೋರ್ಟ್ ಮಹತ್ವದ ತೀರ್ಪು

Published On - 11:04 am, Tue, 15 March 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್