AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನಾದರೂ ಪುಸ್ತಕ ತೆರೆದು ಓದಲಿ; ಅನಗತ್ಯವಾಗಿ ಆರ್​ಎಸ್​ಎಸ್​ ಬಗ್ಗೆ ಮಾತಾಡುವುದು ಸರಿಯಲ್ಲ: ಡಿಕೆ ಸುರೇಶ್ ಟ್ವೀಟ್​ಗೆ ಬಿಸಿ ನಾಗೇಶ್ ಪ್ರತಿಕ್ರಿಯೆ

ಅನಗತ್ಯವಾಗಿ ಶ್ರೇಷ್ಠ ಸಂಸ್ಥೆ, ಕೋಟ್ಯಾಂತರ ಜನರ ಮೇಲೆ ದೇಶಪ್ರೇಮದ ಪ್ರಭಾವ ಬೀರುವ ಸಂಸ್ಥೆ ಆರ್​ಎಸ್​ಎಸ್ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಇನ್ನಾದರೂ ಪುಸ್ತಕ ತೆರೆದು ಓದಲಿ; ಅನಗತ್ಯವಾಗಿ ಆರ್​ಎಸ್​ಎಸ್​ ಬಗ್ಗೆ ಮಾತಾಡುವುದು ಸರಿಯಲ್ಲ: ಡಿಕೆ ಸುರೇಶ್ ಟ್ವೀಟ್​ಗೆ ಬಿಸಿ ನಾಗೇಶ್ ಪ್ರತಿಕ್ರಿಯೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 01, 2022 | 4:41 PM

Share

ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ಬೇಜವಾಬ್ದಾರಿಯಾಗಿ ಟ್ವೀಟ್ ಮಾಡಿದ್ದಾರೆ. ಯಾವ ಪುಸ್ತಕವೇ ಇಲ್ಲ, ಪಾಠವೇ ಇಲ್ಲ, ಅಂಥ ಇಲ್ಲದಿರುವ ಪುಸ್ತಕದ ಬಗ್ಗೆ ಸುರೇಶ್ ಟ್ವೀಟ್ ಮಾಡಿದಾರೆ. ಅವರು ಏನನ್ನೂ ಓದಿಲ್ಲ ಅನ್ನೋದು ಇದರಿಂದ ಸಾಬೀತಾಗಿದೆ. ಮುಂದಿನ ದಿನಗಳಲ್ಲಾದರೂ ಸಂಸದ ಸುರೇಶ್ ಪುಸ್ತಕಗಳನ್ನು ತೆರೆದು ಓದಲಿ. ಬೇಜವಾಬ್ದಾರಿಯುತ ಹೇಳಿಕೆಗಳನ್ನು ಕೊಡುವುದರಿಂದ ಸರ್ಕಾರಿ ಶಾಲೆಗಳ ಬಗ್ಗೆಯೂ ಮಾನಸಿಕತೆ ಬದಲಾಗತ್ತೆ. ಸತ್ಯಾಸತ್ಯತೆ ಪರೀಕ್ಷೆ ಮಾಡಿ ತಾವೇ ಸ್ವತಃ ಓದಿ ಟ್ವೀಟ್ ಮಾಡಲಿ. ಅನಗತ್ಯವಾಗಿ ಶ್ರೇಷ್ಠ ಸಂಸ್ಥೆ, ಕೋಟ್ಯಾಂತರ ಜನರ ಮೇಲೆ ದೇಶಪ್ರೇಮದ ಪ್ರಭಾವ ಬೀರುವ ಸಂಸ್ಥೆ ಆರ್​ಎಸ್​ಎಸ್ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಂಗಳವಾರ ಹೇಳಿದ್ದಾರೆ.

ಉಡುಪಿಯಲ್ಲಿ ಉಂಟಾಗಿರುವ ಯೂನಿಫಾರಂ, ಹಿಜಾಬ್ ವಿವಾದದ ಬಗ್ಗೆಯೂ ಬಿ.ಸಿ. ನಾಗೇಶ್ ಇದೇ ವೇಳೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ರಾಜ್ಯದಲ್ಲಿ ಯೂನಿಫಾರಂ ಹೇಗಿದೆ, ಸುಪ್ರೀಂ ಕೋರ್ಟ್, ಇತರ ಕೋರ್ಟ್​ಗಳು ಏನು ಹೇಳಿದೆ ಎಂದು ನೋಡುತ್ತೇವೆ. ಏಕರೂಪದ ನೀತಿ ಅಂತ ಅಲ್ಲದೇ ಇದ್ದರೂ ಈ ಬಗ್ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡುತ್ತೇವೆ. ಸರ್ಕಾರವೇ ಯೂನಿಫಾರಂ ಕೊಡುತ್ತೋ ಅಥವಾ ಎಸ್​ಡಿಎಂಸಿಗೇ ಆ ಅಧಿಕಾರ ಕೊಟ್ಟರೂ ಯಾವ ಆಧಾರದಲ್ಲಿ ಅದನ್ನು ಮಾಡಬೇಕು ಎಂದು ಹೇಳುತ್ತೇವೆ. ಸಮಿತಿಯ ವರದಿಯಂತೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಆ ಕಾರ್ಯ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ಈ ಪುಟ್ಟ ವಿಷಯ ಅನೇಕ ಸಮಸ್ಯೆಗಳನ್ನು ಸೃಷ್ಟಿಮಾಡಬಹುದು. ಕೇಸರಿ ಶಾಲು, ಹಸುರು ಶಾಲು, ಬನಿಯನ್, ಅರ್ಧ ಪ್ಯಾಂಟ್ ಹೀಗೆ ಬೇಕಾದ್ದನ್ನು ಹಾಕಿಕೊಂಡು ಬರುತ್ತೇವೆ ಅಂತ ಆಗಬಾರದು. ಡ್ರೆಸ್ ಕೋಡ್​​ನಲ್ಲಿ ಏನು ಮಾಡಬಾರದು ಅಂತ ಇತ್ತು. ಏನು ಮಾಡಬೇಕು ಅಂತಲೂ ಹೇಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರ ಆರೋಪ ಏನಿತ್ತು?

ಬಿಜೆಪಿ ಆಡಳಿತದಲ್ಲಿ ಶಾಲಾ ಪಠ್ಯಕ್ರಮದ ಗುಣಮಟ್ಟ ಕುಸಿಯುತ್ತಿದೆ. ವಿದ್ಯಾರ್ಥಿಗಳು ಈಗಾಗಲೇ ಕಡಿಮೆ ಪಠ್ಯಕ್ರಮ ಹೊಂದಿದ್ದಾರೆ. ಇದರ ಜೊತೆಗೆ ಭೋದನೆಗೆ ಸಂಬಂಧಪಟ್ಟ ಸರ್ಕಾರದ ಮೇಲ್ವಿಚಾರಣೆ ಕೂಡ ಇಲ್ಲ. ಸದ್ಯದ ಪಠ್ಯಪುಸ್ತಕಗಳಲ್ಲಿ ಚಿತ್ರಗಳನ್ನು ಶಿಕ್ಷಣ ಸಮಿತಿಯು ಯಾವುದೇ ಸಂಶೋಧನೆ ಮಾಡದೆ ಅಂತರ್ಜಾಲದಿಂದ ತೆಗೆದು ಪ್ರಕಟಿಸುತ್ತಿದೆ. ಅಂದ ಹಾಗೆ ಶಾಲಾ ಪಠ್ಯಕ್ರಮದಲ್ಲಿರುವ ಚಿತ್ರಗಳು ಮತ್ತು ಪಠ್ಯಗಳನ್ನು ಶಿಕ್ಷಣ ಇಲಾಖೆಯಲ್ಲಿ ಸಿದ್ದಪಡಿಸಲಾಗುತ್ತಿದೆಯೋ ಅಥವಾ ಕೇಶವಕೃಪದಲ್ಲೋ ಎಂಬುದನ್ನು ಬಿ.ಸಿ. ನಾಗೇಶ್ ಮತ್ತು ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಬೇಕು. ಬಿಜೆಪಿ ಸರಕಾರದ ತೀವ್ರ ಅಸಡ್ಡೆ ಹಾಗೂ ಅವ್ಯವಸ್ಥೆಯಿಂದ ಕರ್ನಾಟಕವು ಇಡೀ ದೇಶದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿ; ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ರಿಟ್ ಅರ್ಜಿ

ಇದನ್ನೂ ಓದಿ: ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ಬನ್ನಿ; ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ: ಸಭೆಯಲ್ಲಿ ತೀರ್ಮಾನ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು