AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಸಾಯಿ ಲೇಔಟ್​ಗೆ ಸಚಿವ ಬೈರತಿ ಬಸವರಾಜ್ ದೌಡು, ಧರೆಗುರುಳಿದ ಮರಗಳು, ಹಲವೆಡೆ ಪವರ್ ಕಟ್

ರಸ್ತೆಗಳಿಂದ ಮಳೆ ನೀರನ್ನು ಚರಂಡಿಗೆ ಎಳೆದುಕೊಳ್ಳಬೇಕಿದ್ದ ರಂಧ್ರಗಳ ಮೂಲಕವೇ ಮಳೆ ನೀರು ರಸ್ತೆಗಳ ಮೇಲೆ ಹರಿಯುತ್ತಿದ್ದು, ಜನಪ್ರತಿನಿಧಿಗಳೇ ಇಲ್ಲದ ಬಿಬಿಎಂಪಿಗೆ ಜನರು ಹಿಡಿಶಾಪ ಹಾಕುವುದು ಮುಂದುವರಿದಿದೆ.

Bengaluru Rain: ಸಾಯಿ ಲೇಔಟ್​ಗೆ ಸಚಿವ ಬೈರತಿ ಬಸವರಾಜ್ ದೌಡು, ಧರೆಗುರುಳಿದ ಮರಗಳು, ಹಲವೆಡೆ ಪವರ್ ಕಟ್
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಳೆಯಿಂದ ಮರವೊಂದು ಉರುಳಿದೆ.
TV9 Web
| Edited By: |

Updated on:Aug 03, 2022 | 11:10 AM

Share

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ಬಾರಿ ಸಮಸ್ಯೆ ಎದುರಾಗಿದ್ದರೂ ಮಳೆ ಎದುರಿಸಲು ಬಿಬಿಎಂಪಿ ಸಮರ್ಪಕ ಸಿದ್ಧತೆ ಮಾಡಿಕೊಳ್ಳಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಜನರು ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಗಳಿಂದ ಮಳೆ ನೀರನ್ನು ಚರಂಡಿಗೆ ಎಳೆದುಕೊಳ್ಳಬೇಕಿದ್ದ ರಂಧ್ರಗಳ ಮೂಲಕವೇ ಮಳೆ ನೀರು ರಸ್ತೆಗಳ ಮೇಲೆ ಹರಿಯುತ್ತಿದ್ದು, ಜನಪ್ರತಿನಿಧಿಗಳೇ ಇಲ್ಲದ ಬಿಬಿಎಂಪಿಗೆ ಜನರು ಹಿಡಿಶಾಪ ಹಾಕುವುದು ಮುಂದುವರಿದಿದೆ. ಹಲವೆಡೆ ಮರಗಳು ಧರೆಗೆ ಉರುಳಿದ್ದು, ವಿದ್ಯುತ್ ತಂತಿಗಳು ತುಂಡಾಗಿವೆ. ಮಳೆಯ ಜೊತೆಗೆ ವಿದ್ಯುತ್ ಸಂಪರ್ಕವೂ ಕಡಿತಗೊಂಡ ಕಾರಣ ಜನರ ಸಂಕಷ್ಟ ಹೆಚ್ಚಾಗಿದೆ.

ನಗರದ ಸಾಯಿ ಲೇಔಟ್​ಗೆ ಭೇಟಿ ನೀಡಿದ ಬೈರತಿ ಬಸವರಾಜ್, ನಿನ್ನೆ ರಾತ್ರಿಯಿಂದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ. ಸಾಯಿ ಲೇಔಟ್​ನಲ್ಲಿ ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುತ್ತೇವೆ. ರೈಲ್ವೆ ವೆಂಟ್ ಹೆಚ್ಚಿಸುತ್ತೇವೆ. ಈ ಕಾಮಗಾರಿಗೆ ಮುಖ್ಯಮಂತ್ರಿ ₹ 17.5 ಕೋಟಿ ಅನುದಾನ ನೀಡಿದ್ದಾರೆ. ವರ್ಕ್ ಆರ್ಡರ್ ಪಡೆದುಕೊಂಡು ಸ್ಥಳಕ್ಕೆ ಬಂದಿದ್ದೇನೆ. ಸೆಪ್ಟೆಂಬರ್​ನಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗುವುದು. ಮುಂದಿನ ಮಳೆಗಾಲದ ಒಳಗೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ಸಾಯಿ ಲೇಔಟ್​ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಸ್ಥಳೀಯರಿಗೆ ತಿಂಡಿ, ನೀರು, ಹಾಲು ವಿತರಿಸುತ್ತಿದ್ದೇವೆ. ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಜನರಿಗೆ ಸಮಾಧಾನ ಮಾಡಿದರು. ಈಗಲೂ ಸಾಯಿ ಲೇಔಟ್​ನಲ್ಲಿ 4 ಅಡಿಗಳಷ್ಟು ನೀರು ನಿಂತಿದೆ. ನಿವಾಸಿಗಳಿಗೆ ಇಡ್ಲಿ, ಪೊಂಗಲ್, ಚಿತ್ರಾನ್ನ, ಹಾಲು, ನೀರಿನ ವ್ಯವಸ್ಥೆ ಮಾಡಲಾಗಿದೆ. ಟ್ರ್ಯಾಕ್ಟರ್ ಮೂಲಕ ಮನೆಗೆ ಬಾಗಿಲಿಗೆ ತಿಂಡಿ, ಹಾಲು ಸರಬರಾಜು ಮಾಡಲಾಗುತ್ತಿದೆ.

ಪ್ರತಿಬಾರಿ ಮಳೆಯಾದಾಗಲೂ ಸಾಯಿಲೇಔಟ್​ಗೆ ನೀರು ನುಗ್ಗುತ್ತದೆ. ರಿಂಗ್ ರೋಡ್, ಈಸ್ಟ್ ಜೋನ್​ನಿಂದ ರಾಜಕಾಲುವೆ ನೀರು ಸಾಯಿ ಲೇಔಟ್​ಗೆ ನುಗ್ಗುತ್ತದೆ. ಸಾಯಿ ಲೇಔಟ್ ಬಳಿ ರಾಜಕಾಲುವೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲ. ಇದೀಗ ಸ್ಥಳಕ್ಕೆ ಬಂದಿರುವ ಒಂದು ಜೆಸಿಬಿ ವಾಹನ ಲೇಔಟ್ ಒಳಗೆ ತುಂಬಿದ್ದ ನೀರು ಹೊರ ಹಾಕಲು ವ್ಯವಸ್ಥೆ ಮಾಡಿದೆ. ಭಾರಿ ಮಳೆಯಿಂದಾಗಿ ಹೆಬ್ಬಾಳದಲ್ಲಿರುವ ಸಿಎಲ್​ಎ ಲೇಔಟ್ ಜಲಾವೃತಗೊಂಡಿತ್ತು. ಸದ್ಯ ನೀರಿನ ಪ್ರಮಾಣ ಕೊಂಚ ಇಳಿಮುಖವಾಗಿದೆ.

ಮರ ಬಿದ್ದು ಆಟೊಗೆ ಹಾನಿ

ಬೆಂಗಳೂರಿನಲ್ಲಿ ಬುಧವಾರ ಮುಂಜಾನೆ 5 ಗಂಟೆಯಲ್ಲಿ ಮಳೆಯಿಂದಾಗಿ ಚಾಮರಾಜಪೇಟೆಯಲ್ಲಿ ಆಟೊ ಒಂದರ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್​ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಮರ ಬಿದ್ದ ಕಾರಣ ವಿದ್ಯುತ್ ಪೂರೈಕೆಯು ವ್ಯತ್ಯಯವಾಗಿದೆ. ಕೇವಲ 100 ಮೀಟರ್ ದೂರದಲ್ಲಿ ಕೆಇಬಿ ಕಚೇರಿಯಿದ್ದರೂ ಕಂಬ ಮೇಲೆತ್ತಿ, ದುರಸ್ತಿ ಕಾಮಗಾರಿ ಆರಂಭಿಸಲು ಸಿಬ್ಬಂದಿ ಮುಂದೆ ಬರುತ್ತಿಲ್ಲ ಎಂದು ಜನರು ದೂರಿದ್ದಾರೆ.

Published On - 11:10 am, Wed, 3 August 22

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?