AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ

ನಿನ್ನೆ ಸಂಜೆ ಧೀರಜ್ ಪೋಷಕರು ಸ್ಕೂಲ್ಗೆ ಬಂದು ಮಗ ಮಾಡಿದ್ದ ತಪ್ಪಿಗೆ ಅಪೋಲಜಿ ಲೆಟರ್ ಬರೆದುಕೊಟ್ಟ ಹೋಗಿದ್ದರು. ಇದಾದ ಬಳಿಕ ಧೀರಜ್ನನ್ನು ಮನೆಗೆ ಕಳಿಸದೆ ಅವನ ಸ್ನೇಹಿತರ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಧೀರಜ್
TV9 Web
| Edited By: ಆಯೇಷಾ ಬಾನು|

Updated on:Mar 24, 2022 | 5:43 PM

Share

ಬೆಂಗಳೂರು: ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆ(Student Suicide) ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ R.R.ನಗರದಲ್ಲಿರುವ ಸ್ವರ್ಗ ರಾಣಿ ಸ್ಕೂಲ್ನಲ್ಲಿ ಎಂಟನೇ ತರಗತಿ ಮುಖ್ಯ ಪರೀಕ್ಷೆ ನಡೆಯುತ್ತಿದ್ದ ವೇಳೆ 8ನೇ ತರಗತಿಯ ವಿದ್ಯಾರ್ಥಿ ಧೀರಜ್ ಕಾಪಿ ಹೊಡೆಯುತ್ತಿದ್ದ ಅಂತ ಟೀಚರ್ ಪ್ರಿನ್ಸಿಪಾಲ್ ರೂಮ್ಗೆ ಕರೆದುಕೊಂಡು ಹೋಗಿ ಧೀರಜ್ ಪೋಷಕರನ್ನು ಶಾಲೆಗೆ ಕರೆಸಿ ಈ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಮನ ನೊಂದ ವಿದ್ಯಾರ್ಥಿ ಮನೆಯಲ್ಲಿ ನಿನ್ನೆ ಸಂಜೆ ನೇಣಿಗೆ ಶರಣಾಗಿದ್ದಾನೆ. ಸ್ವರ್ಗ ರಾಣಿ ಶಾಲೆಯ ಮುಂದೆ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಸಂಜೆ ಧೀರಜ್ ಪೋಷಕರು ಸ್ಕೂಲ್ಗೆ ಬಂದು ಮಗ ಮಾಡಿದ್ದ ತಪ್ಪಿಗೆ ಅಪೋಲಜಿ ಲೆಟರ್ ಬರೆದುಕೊಟ್ಟ ಹೋಗಿದ್ದರು. ಇದಾದ ಬಳಿಕ ಧೀರಜ್ನನ್ನು ಮನೆಗೆ ಕಳಿಸದೆ ಅವನ ಸ್ನೇಹಿತರ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಇತರೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ಶಾಲಾ ಆಡಳಿತ ಮಂಡಳಿ ಬಂದು ನಿನ್ನೆ ಏನಾಯ್ತು? ಯಾಕೆ ಧೀರಜ್ ಆತ್ಮಹತ್ಯೆ ಮಾಡಿಕೊಂಡ ಎಂಬ ಬಗ್ಗೆ ಮಾಹಿತಿ ನೀಡಬೇಕು ಇಲ್ಲಾಂದ್ರೆ ನಾವು ಇಲ್ಲಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಧೀರಜ್ ಪೋಷಕರು ನಾವು ಇದರಲ್ಲಿ ಭಾಗಿಯಾಗಲ್ಲ ಎಂದು ಆರ್.ಆರ್. ನಗರದ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಧೀರಜ್ ಮೃತದೇಹ ಮನೆಯಲ್ಲಿ ಇಡಲಾಗಿದೆ.

ಕ್ಯಾಂಟರ್ ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದ್ದು ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಬೀಸನಹಳ್ಳಿ ಬಳಿ ನಡೆದಿದೆ. ಕ್ಯಾಂಟರ್‌ ಟೈರ್‌ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಕೇರಳ ಮೂಲದ ಜೋಸೆಫ್ ಮೃತ ದುರ್ದೈವಿ. ಓಲ್ಡ್ ಏರ್‌ಪೋರ್ಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲು.

ವಿಡಿಯೋ ಮಾಡುತ್ತ ಅಜ್ಜಿ ಮೇಲೆ ಕಾರು ಹತ್ತಿಸಿದ ಚಾಲಕ ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತ ರಿವರ್ಸ್ ಬಂದು ಅಜ್ಜಿ ಮೇಲೆ ಚಾಲಕ ಕಾರು ಹತ್ತಿಸಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ರಾಯದ್ರದಲ್ಲಿ ನಿನ್ನೆ ನಡೆದಿದೆ. 75 ವರ್ಷದ ವೃದ್ಧೆ ದೇವಮ್ಮ ಮೇಲೆ ಹಿಂಬದಿಯಿಂದ ಚಾಲಕ ಕಾರು ಹತ್ತಿಸಿದ್ದಾನೆ. ಜನ ರಕ್ಷಣೆಗೆ ಓಡಿಬರೋದನ್ನ ಗಮನಿಸಿ ಕಾರ್ ಕೆಳಗೆ ಸಿಲುಕಿದ್ದ ಅಜ್ಜಿ ಮೇಲೆ ಮತ್ತೊಮ್ಮೆ ಕಾರ್ ಹತ್ತಿಸಿಕೊಂಡೇ ಎಸ್ಕೇಪ್ ಆಗಿದ್ದಾನೆ. ವೃದ್ದೆ ದೇವಮ್ಮ ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಚಾಲಕ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಫೋಟೋದಲ್ಲಿರುವ ಪುಟಾಣಿಯನ್ನು ಗುರುತಿಸಬಲ್ಲಿರಾ?

Realme GT Neo 3: 5 ನಿಮಿಷದಲ್ಲಿ 50% ಚಾರ್ಜ್: 150W ಫಾಸ್ಟ್ ಚಾರ್ಜರ್​​ನ ಹೊಸ ರಿಯಲ್ ಮಿ ಫೋನ್ ಬಿಡುಗಡೆ

Published On - 2:56 pm, Thu, 24 March 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು